ಜನ ಮನದ ನಾಡಿ ಮಿಡಿತ

Advertisement

ಶ್ರೀ ಕ್ಷೇತ್ರ ಕಾರಿಂಜ: ಬಸವ ಶಂಕರ ಇನ್ನಿಲ್ಲ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ ಶಂಕರ ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಸೋಮವಾರ ಅಸು ನೀಗಿದೆ.

ಬಸವ ಶಂಕರ ಕಳೆದ 14ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ. ಒಂದು ವರ್ಷ ಪ್ರಾಯದ ಬಸವನನ್ನು ದೇವರಿಗೆ ಹರಕೆ ರೂಪದಲ್ಲಿ ಒಪ್ಪಿಸಲಾಗಿತ್ತು. ಶಿವ ಕ್ಷೇತ್ರವಾದುದರಿಂದ ಶಂಕರ ಎಂದು ನಾಮಕರಣ ಮಾಡಲಾಗಿತ್ತು. ಸೌಮ್ಯ ಸ್ವಭಾವದ ಶಂಕರ ತನ್ನ ಗಾಂಭೀರ್ಯದಿಂದ ಜಾತ್ರೆ ಸಂದರ್ಭದಲ್ಲಿ ಆಕರ್ಷಣೆಯ ಕೇಂದ್ರವಾಗಿದ್ದ. ಜಾತ್ರೆ ಸಮಯದಲ್ಲಿ ಪ್ರತೀವರ್ಷ ಶಂಕರನಿಗೆ ರಾಜ ಪೋಶಾಕನ್ನು ಕಾವಳಕಟ್ಟೆಯ ದಿನೇಶ್ ಟೈಲರ್ ಅವರು ಸಿದ್ಧಪಡಿಸುತ್ತಿದ್ದರು. ಈ ಬಾರಿಯೂ ಹೊಸ ವಸ್ತ್ರ ತಯಾರಾಗಿತ್ತು. ಕೆಲವು ದಿನಗಳ ಹಿಂದೆ ಶಂಕರನನ್ನು ಆರೈಕೆಗಾಗಿ ಕೆದ್ದಳಿಕೆಗೆ ಕೊಂಡೊಯ್ಯಲಾಗಿತ್ತು. ಶಿವರಾತ್ರಿ ಜಾತ್ರೆಗೆ ಕೆಲವೇ ದಿನಗಳಿರುವಾಗ ಶಂಕರ ಮೃತಪಟ್ಟಿದ್ದು ಗ್ರಾಮಸ್ಥರಿಗೆ ದು:ಖವನ್ನುಂಟುಮಾಡಿದೆ. ಬಸವ ಶಂಕರನ ಅಂತಿಮ ಸಂಸ್ಕಾರವನ್ನು ಕೆದ್ದಳಿಕೆಯಲ್ಲಿ ನೆರವೇರಿಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!