ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು, ಭಾರಿ ಮಳೆ ಹಿನ್ನೆಲೆಯಲ್ಲಿ ನಗರ ಪ್ರದಕ್ಷಿಣೆ ಹಾಕಿದ ಜಿಲ್ಲಾಧಿಕಾರಿ

ಮಂಗಳೂರು: ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಮಂಗಳೂರು ತಾಲೂಕಿನ ಸುರತ್ಕಲ್ ಹೋಬಳಿಯ ಕುಳಾಯಿ ಗ್ರಾಮದಲ್ಲಿ ನಡೆದಿದೆ.

ಸಂತೋಷ್ (34) ಮೃತ ದುರ್ದೈವಿ. ಭಾರಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದಿದ್ದು, ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ವಿದ್ಯುತ್ ತಂತಿ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತನ ಕುಟುಂಬಸ್ಥರಿಗೆ ಇಲಾಖೆಯ ವತಿಯಿಂದ 5 ಲಕ್ಷ ರೂ. ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಭಾರಿ ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ: ಮಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು ನಗರ ಪ್ರದಕ್ಷಿಣೆ ಕೈಗೊಂಡಿದ್ದರು. ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ಗಳು ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!