ಜನ ಮನದ ನಾಡಿ ಮಿಡಿತ

Advertisement

ನಾಟೆಕಲ್ ನಲ್ಲಿ ಭೀಕರ ಅಪಘಾತ, ಗಾಯಾಳು ಯುವಕನೂ ಮೃತ್ಯು!

ಹಳೆಯಂಗಡಿ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಮದ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.


ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ನಿನ್ನೆ ಸಾವನ್ನಪ್ಪಿದ್ದು ಬೈಕ್ ಚಲಾಯಿಸುತ್ತಿದ್ದ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದರು. ಅತೀವೇಗದಿಂದ ಬೈಕ್ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಅಪಘಾತ ಸಂಭವಿಸಿತ್ತು. ನಿಧಿಗೆ ಇಬ್ಬರು ಪುಟಾಣಿ ಮಕ್ಕಳಿದ್ದು ತೋಕೂರಿನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಯತೀಶ್ ದೇವಾಡಿಗ ಪೋಷಕರಿಗೆ ಒಬ್ಬನೇ ಪುತ್ರನಾಗಿದ್ದಾರೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!