ಜನ ಮನದ ನಾಡಿ ಮಿಡಿತ

Advertisement

ಪಾರ್ಕಿಂಗ್ ಮಾಡಿ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ದ್ವಿಚಕ್ರವಾಹನವೊಂದು ಕಳವು

ಬಂಟ್ವಾಳ: ಪಾರ್ಕಿಂಗ್ ಮಾಡಿ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ದ್ವಿಚಕ್ರವಾಹನವೊಂದು ಕಳವಾದ ಘಟನೆ ಬಿ.ಸಿ.ರೋಡಿನ ನಗರ ಪೋಲೀಸ್ ಠಾಣಾ ಸಮೀಪವೇ ನಡೆದಿದೆ.


ವಾಮದಪದವು ಇರ್ವತ್ತೂರು ಮಣ್ಣೂರು ನಿವಾಸಿ ಕಾರ್ತಿಕ್ ಎಂಬವರಿಗೆ ಸೇರಿದ ಸ್ಕೂಟರ್ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ತಿಕ್ ಅವರು ಮಾ. 23 ರಂದು ಶನಿವಾರ ಬೆಳಿಗ್ಗೆ ವಾಮದಪದವು ಮನೆಯಿಂದ ಬಂದು ಬಿಸಿರೋಡಿನ ಹಳೆಯ ತಾಲೂಕು ಪಂಚಾಯತ್ ಕಟ್ಟಡ ಕೆಡವಿದ ಖಾಲಿ ಜಾಗದಲ್ಲಿ ಸ್ಕೂಟರ್ ನಿಲ್ಲಿಸಿ , ಬಡಕಬೈಲು ಎಂಬಲ್ಲಿ ಕೆಲಸದ ನಿಮಿತ್ತ ಹೋಗಿದ್ದರು.


ಕೆಲಸ ಮುಗಿಸಿ ರಾತ್ರಿ ಬಂದು ನೋಡಿದಾಗ ಸ್ಕೂಟರ್ ನಿಲ್ಲಿಸಿದ ಜಾಗದಲ್ಲಿರದೆ ಕಾಣೆಯಾಗಿದ್ದು, ಕಳವಾಗಿರುವ ಸಂಶಯವನ್ನು ವ್ಯಕ್ತಪಡಿಸಿ, ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸ್ಕೂಟರ್ ನ‌ಅಂದಾಜು‌ ಮೌಲ್ಯ 55 ಸಾವಿರ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪೋಲೀಸ್ ಠಾಣೆಯ ಸನಿಹದಲ್ಲೇ ‌ಕಳವು
ಕಳೆದ ಕೆಲವು ಸಮಯಗಳಿಂದ ನಿರಂತರವಾಗಿ ವಾಹನಗಳ ಕಳವು ನಡೆಯುತ್ತಿದ್ದು, ವಾಹನ ಸವಾರರು ಪಾರ್ಕ್ ಮಾಡಿ ತೆರಳಲು ಹೆದರುತ್ತಿದ್ದಾರೆ.ಬಿಸಿರೋಡಿನ ಪ್ಲೈ ಓವರ್ ಅಡಿಭಾಗದಲ್ಲಿ ಅನೇಕ ವಾಹನಗಳು ಕಳವಾಗಿದ್ದು, ಇನ್ನೂ ಬಹುತೇಕ ವಾಹನಗಳ ಪತ್ತೆ ಕಾರ್ಯ ನಡೆಯದೆ ಕಗ್ಗಂಟಾಗಿ ಉಳಿದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಅದರಲ್ಲೂ ಪೋಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ವಾಹನಗಳ ಕಳವು ನಡೆಯುವುತ್ತಿರುವುದು ಸಾರ್ವಜನಿಕ ವಲಯದಲ್ಲಿ ಒಂದಷ್ಟು ಆತಂಕ ವ್ಯಕ್ತವಾಗಿದೆ.
ನಗರ ಪ್ರದೇಶದಲ್ಲಿ ಅಲ್ಲಲ್ಲಿ ಸಿ.ಸಿ.ಕ್ಯಾಮರಾ ಅಳವಡಿಕೆಯಾಗಿದ್ದರೂ ಕೂಡ ಕ್ಯಾಮರಾದ ಕಣ್ತಪ್ಪಿಸಿ ಕಳವು ಮಾಡುವ ಕಳ್ಳರ ಕೈಚಳಕದ ಬಗ್ಗೆ ಪೋಲೀಸ್ ಇಲಾಖೆ ಸರಿಯಾದ ಕ್ರಮಗೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!