ಜನ ಮನದ ನಾಡಿ ಮಿಡಿತ

Advertisement

ವಡಭಾಂಡೇಶ್ವರ ಬಲರಾಮ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ


ಉಡುಪಿ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರಾಮ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿತು.

ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರಗಿತು.


ಬೆಳಿಗ್ಗೆ 6.45ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನೆರವೇರಿಸಲಾಯಿತು. ಬಳಿಕ ನ್ಯಾಸಪೂಜೆ ಪ್ರಸನ್ನಪೂಜೆ ಅವಸೃತಬಲಿ, ಮಹಾ ಮಂತ್ರಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಿತು.

ಸುಮಾರು 15ಸಾವಿರ ಮಂದಿ ಭಕ್ತರು ಪಾಲ್ಗೊಂಡಿದ್ದು ಅನ್ನಪ್ರಸಾದವನ್ನು ಸ್ವೀಕರಿಸಿದರು. ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್, ಅಧ್ಯಕ್ಷ ನಾಗರಾಜ್ ಮೂಲಿಗಾರ್, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ. ಅಮೀನ್, ಪವಿತ್ರಪಾಣಿ ಶಂಕರನಾರಾಯಣ ಐತಾಳ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಉಪಾಧ್ಯಕ್ಷ ರಮೇಶ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು ಕಾರ್ಯದರ್ಶಿ ಜನಾರ್ದನ್ ಕೊಡವೂರು, ಹಾಗೂ ಅಭಿವೃದ್ಧಿ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಭಕ್ತವೃಂದ, ಗುರಿಕಾರರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!