ಜನ ಮನದ ನಾಡಿ ಮಿಡಿತ

Advertisement

ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪ್ರದಾನ

ದಕ್ಷಿಣ ಕನ್ನಡ : ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು ‘ಶ್ರೀ ಸರ್ವೆ ಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ). ೭ನೇ ವಾರ್ಷಿಕೋತ್ಸವದ ಪ್ರಯುಕ್ತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ ‘ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ’ ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಯಾಗಿ ಆಯ್ಕೆಯಾಗಿದ್ದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗ ಮಂದಿರದಲ್ಲಿ ಇತ್ತೀಚೆಗೆ ‘ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಿದರು.

ಶಿಕ್ಷಣ ತಜ್ಞ ಡಾ. ಕೆ. ಪಿ. ಪುತ್ತೂರಾಯ, ಸಂಸ್ಥೆಯ ಗೌರವಾಧ್ಯಕ್ಷ ಶ್ರೀ ಕೆಂಚನೂರು ಶಂಕರ್, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಮಾಲತಿ ಸುಧೀರ್, ಖ್ಯಾತ ನಟಿ ಶ್ರೀಮತಿ ಪದ್ಮಾ ವಸಂತಿ, ಖ್ಯಾತ ಗಾಯಕ ಶಶಿಧರ್ ಕೋಟೆ, ಡಾ. ವಿ ಶ್ರೀನಿವಾಸ ಗುರೂಜಿ, ಡಾ. ಶಿವಕುಮಾರ ಗುರೂಜಿ, ಚಲನ ಚಿತ್ರ ನಟ ಶಿವಕುಮಾರ ಆರಾಧ್ಯ, ಉದ್ಯಮಿ ಶ್ರೀ ಮಹೇಂದ್ರ ಸಿಂಗ್ ಕಾಳಪ್ಪ, ಸಂಸ್ಥೆಯ ರಾಜ್ಯಾಧ್ಯಕ್ಷೆ ಶ್ರೀಮತಿ ಲಕ್ಷಿತಾ ಗಂಗಾವತಿ ಉಪಸ್ಥಿತರಿದ್ದರು.
ಡಾ. ಮಾಲತಿ ಶೆಟ್ಟಿ ಮಾಣೂರುರವರು ೧೮ ವರುಷದಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ ಹಾಗೂ ಕಳೆದ ೧೧ ವರುಷದಿಂದ ಸಾಹಿತ್ಯ ಪರ ಪತ್ರಿಕೆಯನ್ನು ನಡೆಸುತ್ತಿದ್ದಾರೆ. ೯ ಕೃತಿಗಳನ್ನು ಸಾಹಿತ್ಯಲೋಕಕ್ಕೆ ನೀಡಿದ್ದಾರೆ. ಇತರ ಹಿರಿಯ ಕಿರಿಯ ಸಾಹಿತಿಗಳ ೩೮ ಕೃತಿಗಳನ್ನು ಅಮೃತ ಪ್ರಕಾಶ ಪತ್ರಿಕೆ ಸರಿಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿ ಪತಿ ಸತ್ಯ ಪ್ರಕಾಶಶೆಟ್ಟಿ ಜೊತೆ ವಾಸವಾಗಿದ್ದಾರೆ. ಹಲವಾರು ರಾಜ್ಯ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!