ಜನ ಮನದ ನಾಡಿ ಮಿಡಿತ

Advertisement

ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪ್ರದಾನ

ದಕ್ಷಿಣ ಕನ್ನಡ : ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು ‘ಶ್ರೀ ಸರ್ವೆ ಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ). ೭ನೇ ವಾರ್ಷಿಕೋತ್ಸವದ ಪ್ರಯುಕ್ತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ ‘ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ’ ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಯಾಗಿ ಆಯ್ಕೆಯಾಗಿದ್ದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗ ಮಂದಿರದಲ್ಲಿ ಇತ್ತೀಚೆಗೆ ‘ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಿದರು.

ಶಿಕ್ಷಣ ತಜ್ಞ ಡಾ. ಕೆ. ಪಿ. ಪುತ್ತೂರಾಯ, ಸಂಸ್ಥೆಯ ಗೌರವಾಧ್ಯಕ್ಷ ಶ್ರೀ ಕೆಂಚನೂರು ಶಂಕರ್, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಮಾಲತಿ ಸುಧೀರ್, ಖ್ಯಾತ ನಟಿ ಶ್ರೀಮತಿ ಪದ್ಮಾ ವಸಂತಿ, ಖ್ಯಾತ ಗಾಯಕ ಶಶಿಧರ್ ಕೋಟೆ, ಡಾ. ವಿ ಶ್ರೀನಿವಾಸ ಗುರೂಜಿ, ಡಾ. ಶಿವಕುಮಾರ ಗುರೂಜಿ, ಚಲನ ಚಿತ್ರ ನಟ ಶಿವಕುಮಾರ ಆರಾಧ್ಯ, ಉದ್ಯಮಿ ಶ್ರೀ ಮಹೇಂದ್ರ ಸಿಂಗ್ ಕಾಳಪ್ಪ, ಸಂಸ್ಥೆಯ ರಾಜ್ಯಾಧ್ಯಕ್ಷೆ ಶ್ರೀಮತಿ ಲಕ್ಷಿತಾ ಗಂಗಾವತಿ ಉಪಸ್ಥಿತರಿದ್ದರು.
ಡಾ. ಮಾಲತಿ ಶೆಟ್ಟಿ ಮಾಣೂರುರವರು ೧೮ ವರುಷದಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ ಹಾಗೂ ಕಳೆದ ೧೧ ವರುಷದಿಂದ ಸಾಹಿತ್ಯ ಪರ ಪತ್ರಿಕೆಯನ್ನು ನಡೆಸುತ್ತಿದ್ದಾರೆ. ೯ ಕೃತಿಗಳನ್ನು ಸಾಹಿತ್ಯಲೋಕಕ್ಕೆ ನೀಡಿದ್ದಾರೆ. ಇತರ ಹಿರಿಯ ಕಿರಿಯ ಸಾಹಿತಿಗಳ ೩೮ ಕೃತಿಗಳನ್ನು ಅಮೃತ ಪ್ರಕಾಶ ಪತ್ರಿಕೆ ಸರಿಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿ ಪತಿ ಸತ್ಯ ಪ್ರಕಾಶಶೆಟ್ಟಿ ಜೊತೆ ವಾಸವಾಗಿದ್ದಾರೆ. ಹಲವಾರು ರಾಜ್ಯ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!