ಜನ ಮನದ ನಾಡಿ ಮಿಡಿತ

Advertisement

ಏ.3ರಂದು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಬಿ.ರಮಾನಾಥ ರೈ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.


ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಗ್ಗೆ 9.30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಕಾರ್ಯಕರ್ತರು ಈ ಸಂದರ್ಭ ಭಾಗವಹಿಸುವರು ಎಂದು ತಿಳಿಸಿದರು
ಕಾಂಗ್ರೆಸ್ ಬಡ, ಹಿಂದುಳಿದ ವರ್ಗದವರ ಪಕ್ಷವಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ದುಡಿಯುತ್ತಿದೆ. ಕಾಂಗ್ರೆಸ್ ಸಂಸದರ ಕಾಲದಿಂದ ಜಿಲ್ಲೆಯ ಅಭಿವೃದ್ಧಿಯ ಚಿತ್ರಣ ಬದಲಾಗಿದ್ದು, ಮೂರು ದಶಕಗಳಿಂದ ಬಿಜೆಪಿ ಸಂಸದರು ಗೆಲ್ಲುವ ಮೂಲಕ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಟೀಕಿಸಿದರು.
ಈ ಸಂದರ್ಭ ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಮಾಜಿ ಮೇಯರ್ ಮಹಾಬಲ ಮಾರ್ಲ, ಪದ್ಮನಾಭ ಕೋಟ್ಯಾನ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!