ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸಾರ್ವಜನಿಕರ ದಾಹ ತಣಿಸಲು ಜಲ ಕುಟೀರ ಸ್ಥಾಪನೆ

ಉಡುಪಿ: ನಗರದಲ್ಲಿ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದ್ದು, ಬಿಸಿಲ ಧಗೆಯಿಂದ ಜನರು ಹೈರಣಾಗಿದ್ದಾರೆ.


ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದು, ಸಾರ್ವಜನಿಕರ ದಾಹ ತಣಿಸುವ ಉದ್ಧೇಶದಿಂದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಹಾಗೂ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆ ಜಂಟಿಯಾಗಿ ಮಾರುಥಿ ವೀಥಿಕಾದಲ್ಲಿ ಜಲ ಕುಟೀರ ಸ್ಥಾಪಿಸಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ಇಂದು ನಡೆಯಿತು.
ಜಲಕುಟೀರವನ್ನು ಕಾನೂನು ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಎಸ್ ಹಾಗೂ ಪೌರಾಯುಕ್ತ ರಾಯಪ್ಪ ಅವರು ಅಯೋಧ್ಯೆಯಲ್ಲಿ ಬಾಲರಾಮನಿಗೆ ಅಭಿಷೇಕಕ್ಕೆ ಉಪಯೋಗಿಸಿದ ಬೆಳ್ಳಿಯ ಕಳಶದ ಮೂಲಕ ನೀರನ್ನು ಸಾರ್ವಜನಿಕರಿಗೆ ವಿತರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಉಡುಪಿ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಏನ್. ಆರ್, ಗೋಪಾಲ್, ಉದ್ಯಮಿ ಉದಯ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.
ಶುದ್ಧ ಕುಡಿಯುವ ನೀರನ್ನು, ಸದಾ ತಂಪಾಗಿಡುವ ಮೃತ್ತಿಕೆಯ ಹೂಜಿಯಲ್ಲಿ ಸಂಗ್ರಹಿಸಿಡಲಾಗುತ್ತದೆ. ಬಿಸಿಲಿನ ಧಗೆಯಿಂದ ಬಳಲಿದವರಿಗೆ ದಾಹ ತಣಿಸಲು ಇಲ್ಲಿಯ ಜಲಕುಟೀರದಿಂದ ಅನುಕೂಲವಾಗಲಿದೆ. ಈ ಯೋಜನೆ ಮಳೆಗಾಲ ಬರುವರೆಗೆ ಮುಂದುವರಿಯಲಿದೆ ಎಂದು ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!