ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸಾರ್ವಜನಿಕರ ದಾಹ ತಣಿಸಲು ಜಲ ಕುಟೀರ ಸ್ಥಾಪನೆ

ಉಡುಪಿ: ನಗರದಲ್ಲಿ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದ್ದು, ಬಿಸಿಲ ಧಗೆಯಿಂದ ಜನರು ಹೈರಣಾಗಿದ್ದಾರೆ.


ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದು, ಸಾರ್ವಜನಿಕರ ದಾಹ ತಣಿಸುವ ಉದ್ಧೇಶದಿಂದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಹಾಗೂ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆ ಜಂಟಿಯಾಗಿ ಮಾರುಥಿ ವೀಥಿಕಾದಲ್ಲಿ ಜಲ ಕುಟೀರ ಸ್ಥಾಪಿಸಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ಇಂದು ನಡೆಯಿತು.
ಜಲಕುಟೀರವನ್ನು ಕಾನೂನು ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಎಸ್ ಹಾಗೂ ಪೌರಾಯುಕ್ತ ರಾಯಪ್ಪ ಅವರು ಅಯೋಧ್ಯೆಯಲ್ಲಿ ಬಾಲರಾಮನಿಗೆ ಅಭಿಷೇಕಕ್ಕೆ ಉಪಯೋಗಿಸಿದ ಬೆಳ್ಳಿಯ ಕಳಶದ ಮೂಲಕ ನೀರನ್ನು ಸಾರ್ವಜನಿಕರಿಗೆ ವಿತರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಉಡುಪಿ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಏನ್. ಆರ್, ಗೋಪಾಲ್, ಉದ್ಯಮಿ ಉದಯ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.
ಶುದ್ಧ ಕುಡಿಯುವ ನೀರನ್ನು, ಸದಾ ತಂಪಾಗಿಡುವ ಮೃತ್ತಿಕೆಯ ಹೂಜಿಯಲ್ಲಿ ಸಂಗ್ರಹಿಸಿಡಲಾಗುತ್ತದೆ. ಬಿಸಿಲಿನ ಧಗೆಯಿಂದ ಬಳಲಿದವರಿಗೆ ದಾಹ ತಣಿಸಲು ಇಲ್ಲಿಯ ಜಲಕುಟೀರದಿಂದ ಅನುಕೂಲವಾಗಲಿದೆ. ಈ ಯೋಜನೆ ಮಳೆಗಾಲ ಬರುವರೆಗೆ ಮುಂದುವರಿಯಲಿದೆ ಎಂದು ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!