ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸಾರ್ವಜನಿಕರ ದಾಹ ತಣಿಸಲು ಜಲ ಕುಟೀರ ಸ್ಥಾಪನೆ

ಉಡುಪಿ: ನಗರದಲ್ಲಿ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದ್ದು, ಬಿಸಿಲ ಧಗೆಯಿಂದ ಜನರು ಹೈರಣಾಗಿದ್ದಾರೆ.


ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದು, ಸಾರ್ವಜನಿಕರ ದಾಹ ತಣಿಸುವ ಉದ್ಧೇಶದಿಂದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಹಾಗೂ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆ ಜಂಟಿಯಾಗಿ ಮಾರುಥಿ ವೀಥಿಕಾದಲ್ಲಿ ಜಲ ಕುಟೀರ ಸ್ಥಾಪಿಸಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ಇಂದು ನಡೆಯಿತು.
ಜಲಕುಟೀರವನ್ನು ಕಾನೂನು ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಎಸ್ ಹಾಗೂ ಪೌರಾಯುಕ್ತ ರಾಯಪ್ಪ ಅವರು ಅಯೋಧ್ಯೆಯಲ್ಲಿ ಬಾಲರಾಮನಿಗೆ ಅಭಿಷೇಕಕ್ಕೆ ಉಪಯೋಗಿಸಿದ ಬೆಳ್ಳಿಯ ಕಳಶದ ಮೂಲಕ ನೀರನ್ನು ಸಾರ್ವಜನಿಕರಿಗೆ ವಿತರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಉಡುಪಿ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಏನ್. ಆರ್, ಗೋಪಾಲ್, ಉದ್ಯಮಿ ಉದಯ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.
ಶುದ್ಧ ಕುಡಿಯುವ ನೀರನ್ನು, ಸದಾ ತಂಪಾಗಿಡುವ ಮೃತ್ತಿಕೆಯ ಹೂಜಿಯಲ್ಲಿ ಸಂಗ್ರಹಿಸಿಡಲಾಗುತ್ತದೆ. ಬಿಸಿಲಿನ ಧಗೆಯಿಂದ ಬಳಲಿದವರಿಗೆ ದಾಹ ತಣಿಸಲು ಇಲ್ಲಿಯ ಜಲಕುಟೀರದಿಂದ ಅನುಕೂಲವಾಗಲಿದೆ. ಈ ಯೋಜನೆ ಮಳೆಗಾಲ ಬರುವರೆಗೆ ಮುಂದುವರಿಯಲಿದೆ ಎಂದು ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!