ಜನ ಮನದ ನಾಡಿ ಮಿಡಿತ

Advertisement

ನಾಯಿ ಬಾಯಿಯಿಂದ ರಕ್ಷಿಸಿದ ಮುಂಗುಸಿ ಅರಣ್ಯ ಇಲಾಖೆಗೆ ಹಸ್ತಾಂತರ

ಉಳ್ಳಾಲ: ನಾಯಿಯೊಂದು ಮರಿ ಮುಂಗುಸಿಯನ್ನು ಹಿಡಿದು ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಸೂರ್ಯಖಂಡದಲ್ಲಿ ಸಂಭವಿಸಿದ್ದು, ಸಮೀಪದ ಲೇಔಟ್ ಪ್ರಬಂಧಕರೊಬ್ಬರು ಅದಕ್ಕೆ ಶುಶ್ರೂಷೆ ನೀಡಿ ಅರಣ್ಯ ಇಲಾಖೆಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.

ಸೂರ್ಯಖಂಡ ನಿರ್ಮಾಣ ಹಂತದ ಲೇಔಟ್ ಪ್ರಬಂಧಕ ಪುಷ್ಪರಾಜ್ ಹರೇಕಳ, ಕರ್ತವ್ಯ ಸಂಬಂಧ ಸ್ಥಳದಲ್ಲಿದ್ದಾಗ, ನಾಯಿಯೊಂದು ಅಲ್ಲೇ ಸಮೀಪ ಮುಂಗುಸಿ ಮರಿಯನ್ನು ಓಡಿಸಿ ಹಿಡಿದು, ನಂತರ ನೆಲಕ್ಕಪ್ಪಳಿಸಿದೆ. ಇದರಿಂದ ಬಾಲ ಹಾಗೂ ತಲೆಗೆ ಗಂಭೀರ ಗಾಯಗೊಂಡ ಮುಂಗುಸಿ ಗಂಭೀರ ಸ್ಥಿತಿಯಲ್ಲಿತ್ತು. ತಕ್ಷಣ ಸ್ಥಳದಲ್ಲಿದ್ದ ಪುಷ್ಪರಾಜ್ ಅವರು ಮುಂಗುಸಿಗೆ ನೀರು ಹಾಯಿಸಿದ್ದು, ತುಂಡಾದ ಬಾಲಕ್ಕೆ ಶುಶ್ರೂಷೆಯನ್ನು ನೀಡಿದ್ದಾರೆ. ನಂತರ ಅರಣ್ಯ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಮಂಗಳೂರು ರೇಂಜಿನ ಬೀಟ್ ಆಫೀಸರ್ ಪ್ರವೀಣ್ ಹಾಗೂ ಅರಣ್ಯ ವೀಕ್ಷಕ ಅಭಿಜಿತ್ ಅವರು ಮುಂಗುಸಿಗೆ ಚಿಕಿತ್ಸೆ ನೀಡಿ ಮರಳಿ ಅರಣ್ಯಕ್ಕೆ ಬಿಡಲು ಕೊಂಡೊಯ್ದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!