ಜನ ಮನದ ನಾಡಿ ಮಿಡಿತ

Advertisement

ಅಯೋಧ್ಯಾ ರಾಮಮಂದಿರಕ್ಕೆ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳಿಂದ ಆ್ಯಂಬುಲೆನ್ಸ್ ಹಸ್ತಾಂತರ

ಉಡುಪಿ: ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ವತಿಯಿಂದ ಅಯೋಧ್ಯೆ ರಾಮಮಂದಿರಕ್ಕೆ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮೂಲಕ ಸುಸಜ್ಜಿತ ಆ್ಯಂಬುಲೆನ್ಸ್ ಅನ್ನು ಶುಕ್ರವಾರ ಅಯೋಧ್ಯೆಯಲ್ಲಿ ಹಸ್ತಾಂತರಿಸಲಾಯಿತು.

ರಾಮಮಂದಿರಕ್ಕೆ ಪ್ರತಿನಿತ್ಯ ಬರುತ್ತಿರುವ ಲಕ್ಷಾಂತರ ಭಕ್ತರ ತುರ್ತು ಆರೋಗ್ಯ ಸೇವೆಗಾಗಿ ಆ್ಯಂಬುಲೆನ್ಸ್ ಅನ್ನು ಒದಗಿಸುವ ಇಂಗಿತವನ್ನು ಸಂಸ್ಥೆಯ ಪ್ರಮುಖರಾದ ಪಟ್ಟಾಭಿರಾಮ್ ಅವರು ಶ್ರೀಗಳರಲ್ಲಿ ವ್ಯಕ್ತಪಡಿಸಿದ್ದರು. ಅದರಂತೆ ಸುಮಾರು 38 ಲಕ್ಷ ರೂ ವೆಚ್ಚದ ಸುಸಜ್ಜಿತವಾದ ನೂತನ ಆ್ಯಂಬುಲೆನ್ಸ್ ಅ ನ್ನು ಅಯೋಧ್ಯೆಯಲ್ಲಿ ಶ್ರೀ ಪಟ್ಟಾಭಿರಾಮ್ ಮತ್ತು ಅನಿತಾ ಪಟ್ಟಾಭಿರಾಮ್ ಅವರು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ಹಸ್ತಾಂತರಿಸಿದರು.
ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ಕೋಶಾಧಿಕಾರಿ ಸ್ವಾಮಿ ಗೋವಿಂದಗಿರಿ ಮಹಾರಾಜ್, ಅನಿಲ್ ಮಿಶ್ರಾ , ವಿಹಿಂಪ ರಾಷ್ಟ್ರೀಯ ಮುಖಂಡ ಗೋಪಾಲ್ ಜಿ, ಪೇಜಾವರ ಮಠದ ಅಧಿಕಾರಿಗಳಾದ ಶ್ರೀವತ್ಸ ತಂತ್ರಿ , ಶ್ರೀಗಳ ಆಪ್ತರಾದ ಶ್ರೀನಿವಾಸ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!