ಜನ ಮನದ ನಾಡಿ ಮಿಡಿತ

Advertisement

ದ.ಕ. ಲೋಕಸಭಾ ಚುನಾವಣೆ: ಸೌಜನ್ಯಾ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಸೌಜನ್ಯಾ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟ ಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ತಿಳಿಸಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸ್ಪಂದನೆ‌ ನೀಡಿಲ್ಲ. ಆದ್ದರಿಂದ ಈ ಬಾರಿ ನೋಟಕ್ಕೆ ಮತಚಲಾಯಿಸಿ ಗಮನ ಸೆಳೆಯಲು ಉದ್ದೇಶಿಸಲಾಗಿದೆ. ದ‌.ಕ. ಹಾಗೂ ಉಡುಪಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ. 24ರಂದು ನೋಟ ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.

ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜೊತೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದರು.

ಚುನಾವಣೆ ಹಿನ್ನೆಲೆಯಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ಹಣ ಸಾಗಿಸಲು ನಿರ್ಬಂಧ ಇದೆ. ಆದರೆ ಸಂಘದ ಹೆಸರಿನಲ್ಲಿ ಬಡ್ಡಿ ದಂಧೆಯಲ್ಲಿ ಸಂಗ್ರಹಿಸಿದ ಅಕ್ರಮ ಲಕ್ಷಗಟ್ಟಲೆ ಹಣ ಶುಕ್ರವಾರ, ಶನಿವಾರ ನಿರ್ಭೀತಿಯಿಂದ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗಿರೀಶ್ ಮಟ್ಟಣ್ಣನವರ್, ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು. ದ.ಕ. ಹಾಗೂ ಉಡುಪಿಯ ಕರಾವಳಿ ಭಾಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ.24ರಂದು ನೋಟ ಜನಜಾಗೃತಿ ಸಭೆ ನಡೆಸುತ್ತಿರುವುದಾಗಿ ಪ್ರಸನ್ನ ರವಿ ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ತಮ್ಮಣ್ಣ ಶೆಟ್ಟಿ, ಜಯನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!