ಜನ ಮನದ ನಾಡಿ ಮಿಡಿತ

Advertisement

ಸ್ವತಂತ್ರ ತುಳುನಾಡ ಆಳ್ವಿಕೆ ಆರಂಭಿಸಿದ ದಿನ: ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪುಷ್ಪಾರ್ಚನೆಗೈದ ಪದ್ಮರಾಜ್ ಆರ್.

ತುಳುನಾಡ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಂಗಳೂರು: ಇಲ್ಲಿನ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪುಷ್ಪಾರ್ಚನೆ ಮಾಡಿದರು.

ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮೊದಲೇ ತುಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟ ನಡೆದಿತ್ತು. ಇದನ್ನು ಅಮರ ಸುಳ್ಯದ ದಂಗೆ ಎಂದು ಕರೆದರೆ, ಇನ್ನೂ ಕೆಲವರು ತುಳುನಾಡ ಸ್ವಾತಂತ್ರ್ಯ ಸಂಗ್ರಾಮ ಎಂದೂ ಕರೆದದ್ದಿದೆ. ಈ ಹೋರಾಟದಲ್ಲಿ ಕೆದಂಬಾಡಿ ರಾಮಯ್ಯ ಗೌಡ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಈ ಹೋರಾಟದಲ್ಲಿ ಬ್ರಿಟಿಷರನ್ನು ಪರಾಭವಗೊಳಿಸಿದ ತುಳುನಾಡ ಹೋರಾಟಗಾರರು ಮುಂದಿನ 13 ದಿನಗಳ ಕಾಲ ಸ್ವತಂತ್ರ ತುಳುನಾಡನ್ನು ಆಳ್ವಿಕೆ ಮಾಡಿದ್ದರು. ಹೀಗೆ ಆಳ್ವಿಕೆ ಶುರು ಮಾಡಿದ ದಿನ ಏಪ್ರಿಲ್ 5.

ಈ ಹಿನ್ನೆಲೆಯಲ್ಲಿ ಈ ನಾಡಿನ ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣಾರ್ಪಣೆಗೈದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ತುಳುನಾಡ ಸಂಗ್ರಾಮದಲ್ಲಿ ಪಾಲ್ಗೊಂಡ ವೀರರಿಗೆ ಗೌರವ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!