ಜನ ಮನದ ನಾಡಿ ಮಿಡಿತ

Advertisement

ಅಟೋ ಪಲ್ಟಿ ಚಾಲಕ ಗಂಭೀರ

ಕಡಬ :ನಾಯಿ ಅಡ್ಡ ಬಂದು ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಆಲಂಕಾರು ಸಮೀಪದ ಸುರುಳಿ ಎಂಬಲ್ಲಿ ನಡೆದಿದೆ.


ಗಾಯಗೊಂಡವರನ್ನು ಸ್ಥಳೀಯ ವ್ಯಕ್ತಿ ಸುಬ್ರಹ್ಮಣ್ಯ ನಾಯ್ಕ ಎಂದು ಗುರುತಿಸಲಾಗಿದೆ. ಇವರು ತಮ್ಮ ಅಟೋದಲ್ಲಿ ಸುರುಳಿ ಕಡೆಯಿಂದ ಆಲಂಕಾರಿಗೆ ಬರುವಾಗ ಸುರುಳಿ ಸೇತುವೆಯ ಬಳಿ ಇಕ್ಕಟ್ಟಾದ ಸ್ಥಳದಲ್ಲಿ ನಾಯಿ ಅಡ್ಡ ಬಂದು ಅಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಅಟೋ ನಜ್ಜುಗುಜ್ಜಾಗಿದೆ. ಚಾಲಕನ‌ ಕಾಲು ಮುರಿತಕ್ಕೆ ಒಳಗಾಗಿದ್ದು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು‌ ತಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ‌ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಅಟೋದಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿ ಕರು ಇಲ್ಲದೆ ಇರುವುದರಿಂದ ಸಂಭಾವ್ಯ ಅಪಾಯ ತಪ್ಪಿದೆ. ಘಟನೆ ನಡೆದ ಸ್ಥಳ ಅಪಾಯಕಾರಿಯಾಗಿದ್ದು, ಇಕ್ಕಟ್ಟಾದ ಪರಿಣಾಮ ಇಲ್ಲಿ ಹತ್ತು ಹಲವು ಅಫಘಾತ ನಡೆದಿದೆ. ಇಲ್ಲಿ ರಸ್ತೆ ಅಗಲೀಕರಣ ಆಗಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!