ಜನ ಮನದ ನಾಡಿ ಮಿಡಿತ

Advertisement

ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಸರ್ಕಾರದ ಪಾಲುದಾರರು

ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜಕುಮಾರ್ ಅಭಿಮತ
ಉಡುಪಿ: ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯುವ ಪ್ರತಿಯೊಬ್ಬ ನಾಗರೀಕರೂ ಕೂಡ ಸರ್ಕಾರದ ಪಾಲುದಾರು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.


ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಪೂರೈಸಲು ಮಾಸಿಕ ₹50 ಲಕ್ಷ ಹಣ ಕರ್ಚಾಗುತ್ತಿದೆ. ಇಲ್ಲಿ ವಾರ್ಷಿಕ ₹6 ಕೋಟಿ ಹಣ ವ್ಯಯಿಸಬೇಕು. ಆದ್ದರಿಂದ ದೇಶದಲ್ಲಿ ಇಂತಹ ಯೋಜನೆ ಎಲ್ಲಿಯೂ ಇಲ್ಲ ಎಂದರು.
ರಾಜ್ಯದಲ್ಲಿ ₹58 ಸಾವಿರ ಕೋಟಿ ಹಣದ ಹೊರೆ ಸರ್ಕಾರಕ್ಕೆ ಆಗುತ್ತಿದೆ. ಆದರೂ, ಈ ಬಗ್ಗೆ ಯಾವುದೇ, ಒಳ ಒಪ್ಪಂದಕ್ಕೆ ಸರ್ಕಾರ ಸಿದ್ದವಿಲ್ಲ. ಜನ ಸಾಮಾನ್ಯರ ತೆರಿಗೆ ಹಣವನ್ನು ಪುನಃ ಜನರಿಗೆ ತಲುಪಿಸಲಾಗುತ್ತಿದೆ ಎನ್ನುವ ಸಂತಸ ಸರ್ಕಾರಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ತಮ್ಮ ಬದುಕಿನುದ್ದಕ್ಕೂ ಸಹ ಬಡವರು, ದಲಿತರು, ಶೋಷಿತ ವರ್ಗದವರ ಪರವಾಗಿಯೇ ಚಿಂತಿಸುತ್ತಿದ್ದರು. ಅಂದು, ಬಂಗಾರಪ್ಪ ಅವರು ಜನ ಸಾಮಾನ್ಯರಿಗೆ ನೀಡಿದ ಸೇವೆ, ಇಂದಿಗೂ ಜೀವಂತವಾಗಿವೆ ಎಂದರು.
ಬಂಗಾರಪ್ಪ ಅವರ, ಆರಾಧನ, ಗ್ರಾಮೀಣ ಕೃಪಾಂಕ, ಆಶ್ರಯ ಮತ್ತು ರೈತರ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳನ್ನು ಬಡವರಿಗೆ ಬದುಕಲು ನೆಲೆ ಕಲ್ಪಿಸಿಕೊಟ್ಟಿವೆ ಎಂದರು.
ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ, ದೇಶದಲ್ಲಿ ಬಿಜೆಪಿ ಆಡಳಿತದಿಂದ ಜನ ಸಾಮಾನ್ಯರು ಬದುಕು ನಡೇಸುವುದೇ ಶೋಚನೀಯ ಸ್ಥಿತಿ ತಲುಪಿದೆ ಎಂದರು.
ಮಾಜಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಲತಾಯಿ ಧೋರಣೆ ತೋರಿದ್ದಾರೆ. ಅಧಿಕಾರದ ಗದ್ದಿಗೆ ಏರಿ ೧೫ ವರ್ಷ ಕಳೆದವು.ಆದರೆ, ಕ್ಷೇತ್ರ ಮಾತ್ರ ಕತ್ತಲಲ್ಲಿ ಮುಳುಗಿದೆ ಎಂದು ದೂರಿದರು.
ನಟ ಶಿವರಾಜಕುಮಾರ್ ಮಾತನಾಡಿ, ಚಿಕ್ಕ ವಯಸ್ಸಿನಿಂದ ಪತ್ನಿ ಗೀತಾ ಅವರು ಬಂಗಾರಪ್ಪ ಅವರ ರಾಜಕೀಯ ಚಟುವಟಿಕೆಗಳನ್ನು ಹತ್ತಿರದಿಂದ ನೋಡಿ ಬೆಳೆದಿದ್ದಾರೆ. ಬಂಗಾರಪ್ಪ ಅವರು, ಎಲ್ಲಾ ಧರ್ಮ, ಸಮುದಾಯಗಳನ್ನು ಪ್ರೀತಿಯಿಂದ ಕಾಣುತ್ತಿದ್ದರು. ಅದೇ ಗುಣ ಗೀತಾ ಅವರಿಗೆ ಬಂದಿದೆ. ಜಿಲ್ಲೆಯಲ್ಲಿ ಬಂಗಾರಪ್ಪ ಅವರ ಋಣ ತೀರಿಸಲು ಒಂದು ಅವಕಾಶ ಕಲ್ಪಿಸಿಕೊಡಿ ಎಂದರು.

ಪ್ರಮುಖರಾದ ರಾಜು ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ, ಅರವಿಂದ ಪೂಜಾರಿ, ಹರೀಶ್ ಕೊಡಪಾಡಿ, ಚಂದ್ರ ಶೇಖರ ಪೂಜಾರಿ, ಮಂಜುಳ ದೇವಾಡಿಗ ಸೇರಿ ಗಣ್ಯರು ಇದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!