ಜನ ಮನದ ನಾಡಿ ಮಿಡಿತ

Advertisement

ನಮ್ಮ ಮಣ್ಣಿನ ಮೂಲ ಸತ್ವದ ಫಲವೇ ಬಿಸು. ಪ್ರಕೃತಿ ಬಿಟ್ಟು ತುಳುನಾಡು ಇಲ್ಲ;ದುಗ್ಗಣ್ಣ ಸಾವಂತರು

ಮುಲ್ಕಿ: ನಮ್ಮ ಮಣ್ಣಿನ ಮೂಲ ಸತ್ವದ ಫಲವೇ ಬಿಸು. ಪ್ರಕೃತಿ ಬಿಟ್ಟು ತುಳುನಾಡು ಇಲ್ಲ. ಪ್ರಕೃತಿ ನಾಶವಾಗಿದ್ದರ ಫಲವೇ ಇಂದಿನ ಹವಾಮಾನ ವೈಪರೀತ್ಯ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.


ಸಸಿಹಿತ್ಲು ರಂಗ ಸುದರ್ಶನ ಅಶ್ರಯದಲ್ಲಿ ಆಯೋಜಿಸಲಾದ ಬಿಸುರಂಗ ಪರ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನಾಂಗಕ್ಕೆ ಕರಾವಳಿಯ ತುಳುವರ ಹೊಸ ವರ್ಷ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಕಾರ್ಯವಾಗಬೇಕು ಎಂದರು.


ಸಸಿಹಿತ್ಲು ಭಗವತಿ ದೇವಸ್ಥಾನದ ಅನುವಂಶಿಕ ಮೊತ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ನೆಲದ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಎಳೆಯರಿಗೆ ತಿಳಿಸುವ ಕಾರ್ಯ ನಡೆಯಬೇಕು. ವೈಜ್ಞಾನಿಕ ಸತ್ವದ ಸಹಿತ ಆಚರಣೆಯ ಮಹತ್ವಗಳನ್ನು ತಿಳಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು. ಗುಜರಾತಿನ ಹೋಟೆಲ್ ಉದ್ಯಮಿ ಸುವಾಸಿನಿ ನಾಯ್ಕ್ ಬಿಸು ಕಣಿ ಇಟ್ಟು ಜಾನಪದೀಯವಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕ ಸೇವೆಯಲ್ಲಿ ಐವತ್ತು ವರ್ಷ ಪೂರೈಸಿದ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯ ಮತ್ತು ಸಾಧಕ ಭಾಸ್ಕರ ಸುವರ್ಣ ಸಸಿಹಿತ್ತು ರವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಮಂಗಳೂರಿನ ಯೋಜಕ ಇಂಡಿಯದ ಆಡಳಿತ ನಿರ್ದೇಶಕ ಜಗದೀಶ ಬೋಳೂರು ಮತ್ತು ಹಳೆಯಂಗಡಿ ಪಿ.ಸಿ.ಎ. ಬ್ಯಾಂಕಿನ ಕಾರ್ಯನಿರ್ವಾಹಕ అధిಕಾరి ಹಿಮಕರ ಸುವರ್ಣ, ಬಜ್ಜೆ ವ್ಯವಸಾಯ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು , ಗ್ರೀಷ್ಮ ಕಟೀಲು ರಂಗ ಸುದರ್ಶನ ಸಂಸ್ಥೆಯ ನಿರ್ದೇಶಕ ಪರಮಾನಂದ ವಿ. ಸಾಲಿಯಾನ್ , ರಾಜೇಂದ್ರ ಕುಮಾರ್ ಎಕ್ಕಾರು,ಉಪನ್ಯಾಸಕ ಎಸ್.ಆರ್. ಪ್ರಭಾತ್, ಎಸ್.ಆರ್. ಪ್ರದೀಪ್, ಟಿವಿ ನಿರೂಪಕ ನವೀನ್ ಶೆಟ್ಟಿ ಎಡ್ಡೆ ಮಾರ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!