ಜನ ಮನದ ನಾಡಿ ಮಿಡಿತ

Advertisement

ನಮ್ಮ ಮಣ್ಣಿನ ಮೂಲ ಸತ್ವದ ಫಲವೇ ಬಿಸು. ಪ್ರಕೃತಿ ಬಿಟ್ಟು ತುಳುನಾಡು ಇಲ್ಲ;ದುಗ್ಗಣ್ಣ ಸಾವಂತರು

ಮುಲ್ಕಿ: ನಮ್ಮ ಮಣ್ಣಿನ ಮೂಲ ಸತ್ವದ ಫಲವೇ ಬಿಸು. ಪ್ರಕೃತಿ ಬಿಟ್ಟು ತುಳುನಾಡು ಇಲ್ಲ. ಪ್ರಕೃತಿ ನಾಶವಾಗಿದ್ದರ ಫಲವೇ ಇಂದಿನ ಹವಾಮಾನ ವೈಪರೀತ್ಯ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.


ಸಸಿಹಿತ್ಲು ರಂಗ ಸುದರ್ಶನ ಅಶ್ರಯದಲ್ಲಿ ಆಯೋಜಿಸಲಾದ ಬಿಸುರಂಗ ಪರ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನಾಂಗಕ್ಕೆ ಕರಾವಳಿಯ ತುಳುವರ ಹೊಸ ವರ್ಷ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಕಾರ್ಯವಾಗಬೇಕು ಎಂದರು.


ಸಸಿಹಿತ್ಲು ಭಗವತಿ ದೇವಸ್ಥಾನದ ಅನುವಂಶಿಕ ಮೊತ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ನೆಲದ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಎಳೆಯರಿಗೆ ತಿಳಿಸುವ ಕಾರ್ಯ ನಡೆಯಬೇಕು. ವೈಜ್ಞಾನಿಕ ಸತ್ವದ ಸಹಿತ ಆಚರಣೆಯ ಮಹತ್ವಗಳನ್ನು ತಿಳಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು. ಗುಜರಾತಿನ ಹೋಟೆಲ್ ಉದ್ಯಮಿ ಸುವಾಸಿನಿ ನಾಯ್ಕ್ ಬಿಸು ಕಣಿ ಇಟ್ಟು ಜಾನಪದೀಯವಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕ ಸೇವೆಯಲ್ಲಿ ಐವತ್ತು ವರ್ಷ ಪೂರೈಸಿದ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯ ಮತ್ತು ಸಾಧಕ ಭಾಸ್ಕರ ಸುವರ್ಣ ಸಸಿಹಿತ್ತು ರವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಮಂಗಳೂರಿನ ಯೋಜಕ ಇಂಡಿಯದ ಆಡಳಿತ ನಿರ್ದೇಶಕ ಜಗದೀಶ ಬೋಳೂರು ಮತ್ತು ಹಳೆಯಂಗಡಿ ಪಿ.ಸಿ.ಎ. ಬ್ಯಾಂಕಿನ ಕಾರ್ಯನಿರ್ವಾಹಕ అధిಕಾరి ಹಿಮಕರ ಸುವರ್ಣ, ಬಜ್ಜೆ ವ್ಯವಸಾಯ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು , ಗ್ರೀಷ್ಮ ಕಟೀಲು ರಂಗ ಸುದರ್ಶನ ಸಂಸ್ಥೆಯ ನಿರ್ದೇಶಕ ಪರಮಾನಂದ ವಿ. ಸಾಲಿಯಾನ್ , ರಾಜೇಂದ್ರ ಕುಮಾರ್ ಎಕ್ಕಾರು,ಉಪನ್ಯಾಸಕ ಎಸ್.ಆರ್. ಪ್ರಭಾತ್, ಎಸ್.ಆರ್. ಪ್ರದೀಪ್, ಟಿವಿ ನಿರೂಪಕ ನವೀನ್ ಶೆಟ್ಟಿ ಎಡ್ಡೆ ಮಾರ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!