ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನಲ್ಲಿ ಪ್ರಧಾನಿ ಮೋದಿ ವಿಜಯ ಸಂಕಲ್ಪ ಯಾತ್ರೆ; ತೆರೆದ ವಾಹನದಲ್ಲಿ ಮೋದಿ ಬೃಹತ್ ರೋಡ್ ಶೋ

ಮಂಗಳೂರಿನಲ್ಲಿ ಮೋದಿ ಜಿ…

ಎಡ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ

ಲಾಲ್ ಭಾಗ್, ಬಲ್ಲಾಳ್ ಭಾಗ್, ಪಿವಿಎಸ್ ಮೂಲಕ ರೋಡ್ ಶೋ

ರೋಡ್ ಶೋ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಭದ್ರತೆ

ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಂಗಳೂರು ತಲುಪಿದರು. ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ‌ ಆಗಮಿಸಿದ ಪ್ರಧಾನಿ ಅವರು, ಕೆಂಜಾರಿನಿಂದ ನೇರವಾಗಿ ಲೇಡಿಹಿಲ್ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆಯನ್ನ ಮಾಡಿದ್ದಾರೆ.

ಬಳಿಕ ರೋಡ್ ಶೋ ಆರಂಭವಾಗಿದೆ. ಲಾಲ್ ಭಾಗ್, ಬಲ್ಲಾಳ್ ಭಾಗ್, ಪಿವಿಎಸ್ ಮೂಲಕ ರೋಡ್ ಶೋ ಬಂದು ನವಭಾರತ ವೃತ್ತದಲ್ಲಿ ರೋಡ್ ಶೋ ಸಮಾಪ್ತಿಯಾಗಿದೆ. ತೆರೆದ ವಾಹನದಲ್ಲಿ ಮೋದಿ ಎಡ ಭಾಗದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟಾ ಹಾಗೂ ಬಲ ಭಾಗದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ನಿಂತಿದ್ದರು. ಪ್ರಧಾನಿಗಳು ಮಾರ್ಗ ಉದ್ದಕ್ಕೂ ಬಿಜೆಪಿ ಲೋಗೋ ಹಿಡಿದು ಜನರಿಗೆ ತೋರಿಸುತ್ತಾ ಕೈ ಬೀಸಿ ಧನ್ಯವಾದಗಳನ್ನು ಹೇಳ್ತಾ ಇದ್ದರು.. ಬಳಿಕ ಇಲ್ಲಿಂದ ಪ್ರಧಾನಿ ಮೋದಿಯವರು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ, ವಿಶೇಷ ವಿಮಾನದ ಮೂಲಕ ಕೊಚ್ಚಿಗೆ ಪ್ರಯಾಣ ಬೆಳೆಸಲಿದ್ದಾರೆ. ಪ್ರಧಾನಿ ರೋಡ್ ಶೋ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿತ್ತು…

ನಾರಾಯಣಗುರು ವೃತ್ತದಿಂದ ತೆರೆದ ವಾಹನದಲ್ಲಿ ಆರಂಭವಾದ ರೋಡ್ ಶೋ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನೆರೆದಿದ್ದ ಜನಸ್ತೋಮ, ಪ್ರಧಾನಿ ಕಂಡು ಜಯ ಘೋಷ ಮೊಳಗಿಸಿತು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!