ಜನ ಮನದ ನಾಡಿ ಮಿಡಿತ

Advertisement

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ….!

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ.

ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಬಂಟ್ವಾಳ ‌ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು‌ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿನ ಮೇಲೆ ಪೆಟ್ಟು ಬಿದ್ದಿದ್ದು ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನೆ ನಡೆದ ಕೂಡಲೇ ಸಂಚಾರ ಪೋಲೀಸರು ಬೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದು, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!