ಜನ ಮನದ ನಾಡಿ ಮಿಡಿತ

Advertisement

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ….!

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ.

ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಬಂಟ್ವಾಳ ‌ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು‌ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿನ ಮೇಲೆ ಪೆಟ್ಟು ಬಿದ್ದಿದ್ದು ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನೆ ನಡೆದ ಕೂಡಲೇ ಸಂಚಾರ ಪೋಲೀಸರು ಬೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದು, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!