ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಎ.21ರಂದು ಇನ್‌ಫೋಸಿಸ್ ಯಕ್ಷಗಾನ ಕೇಂದ್ರ ಲೋಕಾರ್ಪಣೆ

ಉಡುಪಿ: ಬೆಂಗಳೂರಿನ ಇನ್‌ಫೋಸಿಸ್ ಫೌಂಡೇಷನ್ 15.8 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಮೂಲಕ ನಿರ್ಮಿಸಿದ ಇನಫೋಸಿಸ್ ಫೌಂಡೇಷನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟ್ (ಐವೈಸಿ)ಯ ನೂತನ ಕಟ್ಟಡದ ಲೋಕಾರ್ಪಣೆ ಇದೇ ಬರುವ ಎ.21ರಂದು ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ತಿಳಿಸಿದ್ದಾರೆ.

ಇನ್‌ಫೋಸಿಸ್ ಯಕ್ಷಗಾನ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಟ್ಟಡದಲ್ಲಿ 380 ಮಂದಿ ಕುಳಿತು ವೀಕ್ಷಿಸಬಹುದಾದ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಸಭಾಂಗಣ, ಗ್ರೀನ್‌ರೂಮ್, ಕಾನ್ಫರೆನ್ಸ್ ಹಾಲ್, ಬೋರ್ಡ್ ರೂಮ್ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆ ನಡೆಯಲು ಬೇಕಾದ ಎಲ್ಲಾ ಸೌಲಭ್ಯಗಳು ಉಚಿತವಾಗಿ ದೊರೆಯಲಿವೆ ಎಂದರು.
ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಅವರು ಮಾತನಾಡಿ, ಕಲಾರಂಗ ಖರೀದಿಸಿದ 35 ಸೆನ್ಸ್ ಜಾಗದಲ್ಲಿ ಈ ಭವ್ಯ ಕಟ್ಟಡ ತಲೆ ಎತ್ತಿದೆ. ಯಕ್ಷಗಾನ ಕಲಾರಂಗ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ವರ್ಷದಲ್ಲೇ ಈ ಕಟ್ಟಡ ಉದ್ಘಾಟನೆಗೊಳ್ಳುತ್ತಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ ಎಂದರು.
ಕಟ್ಟಡದ ಉದ್ಘಾಟನಾ ಕಾರ್ಯಕ್ರಮಗಳು ಮೂರು ದಿನಗಳ ಕಾಲ ನಡೆಯಲಿವೆ. ಎ.21ರಂದು ಬೆಳಗ್ಗೆ 9ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀಸುಶ್ರೀಂದ್ರತೀರ್ಥರ ಅನುಗ್ರಹ ಮಂತ್ರಾಕ್ಷತೆಯೊಂದಿಗೆ ಯಕ್ಷಗಾನ ಪರಿಕರಗಳೊಂದಿಗೆ ಮೆರವಣಿಗೆಯಲ್ಲಿ ನೂತನ ಕಟ್ಟಡ ಪ್ರದೇಶಕ್ಕೆ ಆಗಮಿಸಲಾಗುವುದು ಎಂದರು.
ಬೆಳಗ್ಗೆ 10ಗಂಟೆಗೆ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥರು, ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು, ಪಲಿಮಾರು ಮಠದಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥರು ಹಾಗೂ ಶೀರೂರು ಮಠದ ಶ್ರೀವೇದವರ್ಧನ ತೀರ್ಥರ ನೂತನ ಕಟ್ಟಡದ ದ್ವಾರಪೂಜೆ ನೆರವೇರಿಸಲಿದ್ದಾರೆ ಎಂದರು.
ಮಧ್ಯಾಹ್ನ 3:30ಕ್ಕೆ ಕಲಾರಂಗ-ಐವೈಸಿ ಸಭಾಂಗಣದಲ್ಲಿ ಕಟ್ಟಡವನ್ನು ಇನ್‌ಫೋಸಿಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಹಾಗೂ ಇನ್‌ಫೋಸಿಸ್ ಫೌಂಡೇಷನ್‌ನ ವಿಶ್ವಸ್ಥ ಸುನಿಲ್‌ಕುಮಾರ್ ಧಾರೇಶ್ವರ್ ಉದ್ಘಾಟಿಸಲಿದ್ದಾರೆ. ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಯಕ್ಷಗಾನ ಕಲಾರಂಗದ ಎಸ್.ವಿ.ಭಟ್, ಪಿ.ಕಿಶನ್ ಹೆಗ್ಡೆ, ಪ್ರೊ.ನಾರಾಯಣ ಹೆಗಡೆ, ವಿಜಯ ಕುಮಾರ್ ಶೆಟ್ಟಿಗಾರ್, ಪ್ರೊ.ಸದಾಶಿವ ರಾವ್, ಬಿ.ಜಿ.ಶೆಟ್ಟಿ, ಅಶೋಕ ಎಂ., ಅನಂತರಾಜ್ ಉಪಾಧ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!