ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾಲೂಕಿನ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ…..!!

ಬಂಟ್ವಾಳ ತಾಲೂಕಿನ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಕೆಲವು ಮತಗಟ್ಟೆಯಲ್ಲಿ ಪ್ರಾರಂಭದಲ್ಲಿ ಮತಯಂತ್ರಗಳು ಕೈ ಕೊಟ್ಟರೆ ಇನ್ನು‌ಕೆಲವು ಕಡೆಗಳ ಮತಯಂತ್ರಗಳು ಮಧ್ಯಾಹ್ನ ವೇಳೆ ಕೆಟ್ಟು ಹೋಗಿದೆ.


ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಕೈಕುಂಜೆ ಎ.ಪಿ.ಎಂ.ಸಿ. ಮತಗಟ್ಟೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ 12.30 ರ ವರೆಗೆ ಅರ್ಧ ತಾಸುಗಳ ಕಾಲ ಯಂತ್ರ ಸ್ಥಗಿತಗೊಂಡ ಘಟನೆ ನಡೆಯಿತು.ಬಳಿಕ ಹೊಸ ಯಂತ್ರವನ್ನು ತರಿಸಿ , ಮತದಾನ ಮಾಡಲಾಗಿದೆ. ಇದೇ ರೀತಿ ಬಿ.ಸಿ.ರೋಡಿನ ಅಜ್ಜಿಬೆಟ್ಟು ಎಂಬಲ್ಲಿ ಸರಕಾರಿ ಶಾಲೆಯಲ್ಲಿನ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, 11 ಗಂಟೆಯಿಂದ 11.20 ರ ವರೆಗೆ 20 ನಿಮಿಷಗಳ ಕಾಲ ಮತದಾನ ಸ್ಥಗಿತಗೊಂಡಿತ್ತು. ಬಳಿಕ ಟೆಕ್ನೀಷಿಯನ್ ಬಂದು ಯಂತ್ರದ ರಿಪೇರಿ ಮಾಡಿ ಮತ್ತೆ ಮತದಾನ ಪ್ರಕ್ರಿಯೆ ಮುಂದುವರಿಯಿತು.


ಕೈಕೊಟ್ಟ ಕರೆಂಟ್
ಲೋಕಸಭಾ ಸಭಾ ಚುನಾವಣೆ ನಡೆಯುತ್ತಿರುವ ವೇಳೆ ಕರೆಂಟ್ ಅವಾಗ ಅವಾಗ ಕಣ್ಣು ಮುಚ್ಚಾಲೆ ಆಟ ಆಡುವುದು ಕಂಡು ಬಂತು. ಕೊಠಡಿಯೊಳಗೆ ಪ್ಯಾನ್ ಇಲ್ಲದೆ ಕೂರಲು ಸಾಧ್ಯವಾಗದ ಸಮಯದಲ್ಲಿ ‌ಕರೆಂಟ್ ಕೈ ಕೊಟ್ಟಿರುವುದು ಸಾಕಷ್ಟು ತೊಂದರೆ ಉಂಟು‌ಮಾಡಿತ್ತು. ಇನ್ನೊಂದು ಕಡೆಯಿಂದ ಕೊಠಡಿಗಳು ಕತ್ತಲೆಯಾಗಿದ್ದು,ಮತದಾನ ಮಾಡಲು ಯಂತ್ರಗಳು ಸರಿಯಾಗಿ ಕಾಣಿಸುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿವೆ.


ಉಳಿದ ದಿನಗಳಲ್ಲಿ ‌ಕರೆಂಟ್ ನ ಪವರ್ ‌ಕಟ್ ಆಟಗಳು ನಡೆಯುತ್ತಿರುವ ವಿಚಾರ ಸಾಮಾನ್ಯವಾದರೂ, ಇವತ್ತು ‌ಚುನಾವಣೆಯ ದೃಷ್ಟಿಯಿಂದ ಇಡೀ ದಿನ ಪವರ್ ಕಟ್ ಮಾಡದೆ ಕರೆಂಟ್ ನೀಡಬೇಕಿತ್ತು ಎಂಬು ಮಾತುಗಳು ಸಾರ್ವಜನಿಕ ವಲಯದಲ್ಲಿ ‌ಕೇಳಿ ಬಂತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!