ಜನ ಮನದ ನಾಡಿ ಮಿಡಿತ

Advertisement

ನೆಲ್ಯಾಡಿ: ತಾಳಿ ಕಟ್ಟಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಎ.26ರಂದು ನಡದಿದೆ.

ಕೊಣಾಲು ಗ್ರಾಮದ ಕೋಲ್ಪೆ ದಿ.ಬಾಬು ಗೌಡರ ಪುತ್ರ ಉಮೇಶ ರವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ.ಕೊರಗಪ್ಪ ಗೌಡರವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು.

ಏ.25ರಂದು ಬೆಳಿಗ್ಗೆ 11.35ರ ಮುಹೂರ್ತದಲ್ಲಿ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ವಿವಾಹ ನಡೆದು ಮಧ್ಯಾಹ್ನ 1 ಗಂಟೆಗೆ ಕೊಲ್ಪೆಯ ವರನ ಮನೆಯಲ್ಲಿ ಸತ್ಕಾರ ಕೂಟ ನಿಗದಿಯಾಗಿತ್ತು. ಅದರಂತೆ ವರ ಹಾಗೂ ವಧುವಿನ ಕಡೆಯವರು ದೇವಸ್ಥಾನಕ್ಕೆ ಮದುವೆ ದಿಬ್ಬಣದಲ್ಲಿ ಬಂದಿದ್ದರು. ಧಾರೆಯ ಸೀರೆ ಹಾಗೂ ಶೃಂಗಾರದೊಂದಿಗೆ ಮದುವೆ ಮಂಟಪಕ್ಕೆ ಬಂದಿದ್ದ ವಧು ಸರಸ್ವತಿ ಹಾಗೂ ವರ ಉಮೇಶ ಪರಸ್ಪರ ಹೂಮಾಲೆ ಹಾಕಿಸಿಕೊಂಡಿದ್ದರು. ಇನ್ನು ವರ ಉಮೇಶ ತಾಳಿ ಕಟ್ಟಲು ಮುಂದಾಗುತ್ತಿದ್ದಂತೆ ವಧು ಸರಸ್ವತಿ ಈ ಮದುವೆ ನನಗೆ ಇಷ್ಟ ಇಲ್ಲ ಎಂದು ಹೇಳಿ ತಾಳಿ ಕಟ್ಟಲು ಅವಕಾಶ ನೀಡಲಿಲ್ಲ ಎಂದು ವರದಿಯಾಗಿದೆ. ಇದರಿಂದ ಎರಡೂ ಕಡೆಯವರೂ ವಿಚಲಿತಗೊಂಡು ವಧುವಿನ ಮನವೊಲಿಕೆಗೆ ಮುಂದಾದರೂ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿರುವುದರಿಂದ ಬಳಿಕ ಎರಡೂ ಕಡೆಯವರೂ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು.

ಮತ್ತೆ ಮದುವೆಯಾಗಲು ವರ ನಿರಾಕರಣೆ:
ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಆಗಿರುವ ಅಚಾತುರ್ಯ ಕ್ಕೆ ಪಶ್ಚಾತಾಪ ಪಟ್ಟು ಉಮೇಶ ಅವರನ್ನು ಮದುವೆ ಆಗಲು ಒಪ್ಪಿಗೆ ಸೂಚಿಸಿದರೂ ಉಮೇಶ್ ಅವರು ನಿರಾಕರಿಸಿದರೆಂದು ಹೇಳಲಾಗಿದೆ. ಇದರಿಂದಾಗಿ ಎರಡೂ ಕಡೆಯವರು ಠಾಣೆಯಲ್ಲಿ ಮುಚ್ಚಳಿಕೆ ಬರೆಸಿ ತಮ್ಮ ತಮ್ಮ ಮನೆಗಳಿಗೆ ತೆರಳಿದರು ಎಂದು ವರದಿಯಾಗಿದೆ.

ವರನ ಮನೆಯಲ್ಲಿ ಔತಣ ಕೂಟಕ್ಕೆ ಸಿದ್ದತೆ;
ವರನ ಮನೆಯಲ್ಲಿ ಮದುವೆ ಔತಣ ಕೂಟಕ್ಕೆ ಮಾಂಸಾಹಾರಿ ಊಟಕ್ಕೆ ಸಿದ್ಧತೆ ಮಾಡಲಾಗಿತ್ತು. ಸುಮಾರು 500 ಮಂದಿಗೆ ಊಟಕ್ಕೆ ಸಿದ್ಧತೆ ಮಾಡಲಾಗಿತ್ತು. 1 ಸಾವಿರದಷ್ಟು ಐಸ್ ಕ್ರೀಮ್ ಸಹ ತರಿಸಲಾಗಿತ್ತು. ಮದುವೆ ಮುರಿದು ಬಿದ್ದಿರುವುದರಿಂದ ಇವೆಲ್ಲವೂ ಹಾಗೇ ಉಳಿದಿದೆ. ಕೊನೆ ಕ್ಷಣದಲ್ಲಿ ಯುವತಿ ಮದುವೆ ನಿರಾಕರಿಸಿದರಿಂದ ಎರಡೂ ಕಡೆಯವರಿಗೂ ಲಕ್ಷಾಂತರ ರೂಪಾಯಿ ನಷ್ಟ ಆಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!