ಮುಲ್ಕಿ:ಕಿನ್ನಿಗೋಳಿ ಸಮೀಪದ ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಹಗಲು ರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ದಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ನರಹರಿ ತಂತ್ರಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ನವಕ ಪ್ರಧಾನ, ಮಹಾಪೂಜೆ, ಮಧ್ಯಾಹ್ನ ಶ್ರೀ ದೇವರ ಹಗಲು ರಥೋತ್ಸವ , ಪಲ್ಲ ಪೂಜೆ,ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ದೇವರ ಉತ್ಸವ ಬಲಿ, ಪಡು ಸವಾರಿ,ಶ್ರೀ ಭೂತ ಬಲಿ ಕವಾಟ ಬಂಧನ,ಶಯನೋತ್ಸವ ನಡೆಯಿತು
ಈ ಸಂದರ್ಭ ಕ್ಷೇತ್ರದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ, ದಿನೇಶ್ ಬಂಡ್ರಿಯಾಲ್ ಎಳತ್ತೂರು ಗುತ್ತು, ಬಾಲಕೃಷ್ಣ ಯಾನೆ ಶಂಕರ್ ರೈ,ಗುಣಪಾಲ ಶೆಟ್ಟಿ
ಮತ್ತಿತರರು ಉಪಸ್ಥಿತರಿದ್ದರು
ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಎ.27ರಂದು ಬೆಳಿಗ್ಗೆ ಕವಾಟೋದ್ಘಾಟನೆ, ತುಲಾಭಾರ ಸೇವೆ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ರಥೋತ್ಸವ ನಡೆಯಲಿದೆ.



