ಜನ ಮನದ ನಾಡಿ ಮಿಡಿತ

Advertisement

ನಂದಿಕೂರು ಬಳಿ ಭೀಕರ ಅಪಘಾತ, ಕಾವೂರಿನ ಮಹಿಳೆ ಮೃತ್ಯು

ಮಂಗಳೂರು: ಪಡುಬಿದ್ರಿ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್‌ ಬಳಿ ವ್ಯಾಗನರ್‌ ಕಾರು ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.


ಮೃತಪಟ್ಟವರನ್ನು ಕಾವೂರು ಮೂಲದ ಪುರುಷೋತ್ತಮ ಆರ್‌. ಆಭ್ಯಂಕರ್‌ ಅವರ ಪತ್ನಿ ಸುಮಂಗಲಾ ಎಂ. (55) ಎಂದು ತಿಳಿದು ಬಂದಿದೆ.
ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕಾರ್ ಚಲಾಯಿಸಿಕೊಂಡು ಹೋಗುವಾಗ ಅಪಘಾತ ಸಂಭವಿಸಿದೆ. ದಂಪತಿ ಮಾಳದಲ್ಲಿ ನಡೆಯಲಿದ್ದ ಉಪನಯನ ಕಾರ್ಯಕ್ರಮಕ್ಕೆ ಹೋಗುತ್ತಿದ್ದರೆಂದು ಸಂಬಂಧಿಕರು ತಿಳಿಸಿದ್ದಾರೆ.
ರಾಜ್ಯ ಹೆದ್ದಾರಿಯಲ್ಲಿ ಸಹಜವಾಗಿ ವೇಗವಾಗಿಯೇ ಬರುತ್ತಿದ್ದ ಕಾರು ಒಮ್ಮೆಲೇ ರಸ್ತೆಯ ತೀರ ಎಡಕ್ಕೆ ಚಲಿಸಿ ಡಾಮರು ರಸ್ತೆಯಿಂದ ಮಣ್ಣಿನ ರಸ್ತೆಗೆ ಇಳಿದು ರಸ್ತೆಯ ಬದಿಯಲ್ಲಿದ್ದ ಸಿಮೆಂಟ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!