ಜನ ಮನದ ನಾಡಿ ಮಿಡಿತ

Advertisement

‘ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಕೇಸ್!!

ಬೆಂಗಳೂರು : ಇತ್ತೀಚೆಗೆ ಆರಂಭವಾದ ‘ಮಹಾನಟಿ’ ಧಾರಾವಾಹಿ ರಿಯಾಲಿಟಿ ಶೋ ಜನಪ್ರಿಯತೆಯನ್ನು ಗಳಿಸಿಕೊಳ್ಳುತ್ತಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ಒಂದೊಳ್ಳೆ ವೇದಿಕೆ ನೀಡಿತ್ತು. ಆದರೆ ಇದೀಗ ಸಂಪೂರ್ಣ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.

ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆಗೆ ಆಸ್ಪದ ನೀಡಿದೆ. ‘ಮೆಕ್ಯಾನಿಕ್​ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್​ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್‌ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.

ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!