ಜನ ಮನದ ನಾಡಿ ಮಿಡಿತ

Advertisement

ಮೇ.3ರಂದು `ಗಬ್ಬರ್ ಸಿಂಗ್’ ತುಳು ಸಿನಿಮಾ ಬಿಡುಗಡೆ

ಪುತ್ತೂರು: ಮುತ್ತುಗೋಪಾಲ ಫಿಲ್ಮ್ ನಿರ್ಮಾಣದಲ್ಲಿ ಸುಮಾರು ೧.೭೦ ಕೋಟಿ ಬಜೆಟ್‌ನಲ್ಲಿ ತಯಾರಿಸಲಾದ `ಗಬ್ಬರ್ ಸಿಂಗ್’ ತುಳು ಸಿನಿಮಾ ಮಾ. ೩ರಂದು ತೆರೆಕಾಣಲಿದೆ ಎಂದು ಸಿನಿಮಾದ ನಟ ಚಂದ್ರಹಾಸ ಶೆಟ್ಟಿ ಮಾಣಿ ತಿಳಿಸಿದ್ದಾರೆ.

ಅವರು ಬುಧವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಚಂದ್ರಶೇಖರ ಸನಿಲ್ ಮತ್ತು ನಾಗೇಶ್ ಪೂಜಾರಿ ಅರ್ಪಿಸುವ ಗಬ್ಬರ್ ಸಿಂಗ್ ಸಿನಿಮಾದಲ್ಲಿ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಪಕರಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರದೀಪ್ ನಿರ್ದೇಶನದಲ್ಲಿ, ಪುಷ್ಪರಾಜ್ ಮತ್ತು ಜಯರಾಜ್ ಸಹನಿರ್ದೇಶನದಲ್ಲಿ ಸಿನಿಮಾ ತಯಾರಾಗಿದ್ದು, ಮಧು ಸುರತ್ಕಲ್ ಸಂಭಾಷಣೆ ಬರೆದಿದ್ದಾರೆ.
ಶರಣ್ ಶೆಟ್ಟಿ ನಾಯಕ, ವೆನ್ಸಿಟಾ ಡಯಾಸ್ ನಾಯಕಿಯಾಗಿ ಅಭಿನಯಿಸಿದ್ದು, ಮುಖ್ಯ ಭೂಮಿಕೆಯಲ್ಲಿ ಹಾಸ್ಯ ನಟರಾದ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೊಜರಾಜ್ ವಾಮಂಜೂರು, ರವೀ ರಾಮಕುಂಜ ಸೇರಿದಂತೆ ಹಲವಾರು ಹಾಸ್ಯ ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯ ಮಂಗಳೂರು, ಉಡುಪಿ, ಬ್ರಹ್ಮಾವರ, ಕಾರ್ಕಳ, ಬೈಂದೂರು ಮತ್ತಿತರ ಪ್ರದೇಶಗಳಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.
ಮೇ. ೩ರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.

ಸುದ್ಧಿಗೋಷ್ಠಿಯಲ್ಲಿ ಗಬ್ಬರ್‌ಸಿಂಗ್ ಸಿನಿಮಾದ ನಾಯಕ ನಟ ಶರಣ್ ಶೆಟ್ಟಿ, ನಾಯಕಿ ನಟಿ ವೆನ್ಸಿಟಾ ಡಯಾಸ್ ಸಿನಿಮಾದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!