ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪಾತ್ರ ಮುಗಿಸಿ ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ ಯಕ್ಷಗಾನ ಕಲಾವಿದ ಮೃತ್ಯು

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನರಾದರು. ಅವರಿಗೆ 59 ವರ್ಷ ವಯಸ್ಸಾಗಿತ್ತು.


ನಾಲ್ಕು ದಶಕಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ ಅವರು, ಯಕ್ಷಗಾನ ಪ್ರಸಂಗದಲ್ಲಿ ತನ್ನ ಕೊನೆಯ ಪಾತ್ರ ನಿರ್ವಹಣೆ ಮುಗಿಸಿ ಕೊನೆಯುಸಿರೆಳೆದಿದ್ದಾರೆ.
ನಿನ್ನೆ (ಮೇ 1) ಕೋಟ ಗಾಂಧಿ ಮೈದಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮಿಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿದ್ದ ಹಾಗೆ ರಾತ್ರಿ ಸುಮಾರು 12.25ಕ್ಕೆ ಚೌಕಿಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರು ಯಾವುದೇ ಪಾತ್ರ ನೀಡಿದರೂ ಸಮರ್ಥವಾಗಿ ನಿರ್ವಹಿಸುತ್ತಿದ್ದ ಹಿರಿಯ ಸವ್ಯಸಾಚಿ ಕಲಾವಿದರಾಗಿದ್ದರು. ಚೌಕಿಯಿಂದಲೇ ನಿರ್ಗಮಿಸಿದ ಹಿರಿಯ ಪುಣ್ಯಾತ್ಮರ ಸಾಲಿಗೆ ಗಂಗಾಧರರೂ ಸೇರಿದಂತಾಗಿದೆ. ಪ್ರಸಂಗದ ಕೊನೆಯ ದೃಶ್ಯದ ಮೊದಲಿನ ಭಾಗದಲ್ಲಿ ಇವರ ಪಾತ್ರ ನಿರ್ವಹಣೆ ಇತ್ತು. ನಿರ್ವಹಣೆ ಮುಗಿಸಿ ವೇಷ ಕಳಚುತಿದ್ದಂತೆ ಹೃದಯಾಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!