ಜನ ಮನದ ನಾಡಿ ಮಿಡಿತ

Advertisement

ಉತ್ತಮ ಸಮಾಜದ ನಿರ್ಮಾಣದ ಶಕ್ತಿ ಮಾಧ್ಯಮಗಳಿಗಿದೆ -ಪ್ರೊ.ಪಿ.ಎಲ್ .ಧರ್ಮ

ಮಂಗಳೂರು, ಮೇ.9;ಉತ್ತಮ ಸಮಾಜದ ನಿರ್ಮಾಣದ ಶಕ್ತಿ ಮಾಧ್ಯಮ ಗಳಿಗಿದೆ. ಮುಖ್ಯವಾಗಿ ಯುವಜನರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.


ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಗುರುವಾರ ಹಮ್ಮಿಕೊಂಡ ಪ.ಗೋ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡ ಕರೆಯವರಿಗೆ ಪ.ಗೋ ಪ್ರಶಸ್ತಿ ವಿತರಿಸಿ ಮಾತನಾಡುತ್ತಿದ್ದರು.
ಮಾಧ್ಯಮ ಗಳು ಪರಂಪರೆಯ ಕೊಂಡಿ ಯಾಗಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಕಾರ್ಯ ನಿರ್ವಹಿಸು ತ್ತಾ ಬಂದಿದೆ. ಮಂಗಳೂರು ವಿಶ್ವ ವಿದ್ಯಾನಿಲ ಯದ ಬೆಳವಣೆಗೆಯಲ್ಲಿ ಮಹತ್ವದ ಪಾತ್ರವಹಿಸಿದೆ.ಯುವ ಜನರಲ್ಲಿ ಕಲಿಕೆಯ ಬಗ್ಗೆ ಇರುವ ನಿರಾಸಕ್ತಿಯನ್ನು ದೂರ ಮಾಡಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಪಿ.ಎಲ್.ಧರ್ಮ ತಿಳಿಸಿದ್ದಾರೆ.
ಮಾಧ್ಯಮ ಗಳು ಪದ ಬಳಕೆಯ ಬಗ್ಗೆ ಎಚ್ಚರಿಕೆ ವಹಿಸಬೇಕು.ಸಮಾಜದಲ್ಲಿನ ವಿಕೃತಿಗಳನ್ನು ಮೀರಿ ಮಾಧ್ಯಮಗಳು ಸಮಾಜದ ಉತ್ತಮ ಭವಿಷ್ಯ ವನ್ನು ರೂಪಿಸುವ ಶಕ್ತಿ ಯನ್ನು ಹೊಂದಿದೆ ಈ ನಿಟ್ಟಿನಲ್ಲಿ ಮಾಧ್ಯಮಗಳು ಗಮನಹರಿಸಲು ಮನವಿ ಮಾಡುವುದಾಗಿ ಪ್ರೊ.ಪಿ. ಎಲ್.ಧರ್ಮ ತಿಳಿಸಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಹಿರಿಯ ಪತ್ರಕರ್ತ ದಿವಂಗತ ಪದ್ಯಾಣ ಗೋಪಾಲಕೃಷ್ಣರ ಒಡನಾಟದ ಬಗ್ಗೆ ಮಾತನಾಡಿ ಪತ್ರಕರ್ತರು ವರ್ತಮಾನ ಕಾಲದಲ್ಲಿದ್ದು ಭೂತಕಾಲದ ಜ್ಞಾನದೊಂದಿಗೆ ಭವಿಷ್ಯದ ಚಿಂತನೆ ಹೊಂದಿರಬೇಕಾದ ಅಗತ್ಯವಿದೆ ಎಂದರು. ಪ.ಗೋ ಪ್ರಶಸ್ತಿ ವಿಜೇತ ವಾರ್ತಾಭಾರತಿ ಪತ್ರಿಕೆಯ ವಿಶೇಷ ವರದಿಗಾರ ಇಸ್ಮಾಯಿಲ್ ಕಂಡಕೆರೆ ಮಾತನಾಡುತ್ತಾ,ಪತ್ರಿಕೆ ಗಳು ಗ್ರಾಮೀಣ ಪ್ರದೇಶದ ಸಮಸ್ಯೆ ಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕಾದ ಅಗತ್ಯವಿದೆಎಂದವರು ವಿವರಿಸಿದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆವಹಿಸಿದ್ದರು.
ಸಮಾರಂಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಆರ್,ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ ಬಂಟ್ವಾಳ,ಪದ್ಯಾಣ ಗೋಪಾಲಕೃಷ್ಣರವರ ಪುತ್ರ ವಿಶ್ವೇಶ್ವರ ಭಟ್ ,ಮ್ಯಾಮ್ ನ ಗೌರವಾಧ್ಯಕ್ಷ ವೇಣು ಶರ್ಮ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಡಸ್ಥಳ,ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತ,ಹರ್ಷ ಮೊದಲಾದ ವರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಪ್ರೆಸ್ ಕ್ಲಬ್ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!