ಜನ ಮನದ ನಾಡಿ ಮಿಡಿತ

Advertisement

ಉತ್ತಮ ಸಮಾಜದ ನಿರ್ಮಾಣದ ಶಕ್ತಿ ಮಾಧ್ಯಮಗಳಿಗಿದೆ -ಪ್ರೊ.ಪಿ.ಎಲ್ .ಧರ್ಮ

ಮಂಗಳೂರು, ಮೇ.9;ಉತ್ತಮ ಸಮಾಜದ ನಿರ್ಮಾಣದ ಶಕ್ತಿ ಮಾಧ್ಯಮ ಗಳಿಗಿದೆ. ಮುಖ್ಯವಾಗಿ ಯುವಜನರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.


ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಗುರುವಾರ ಹಮ್ಮಿಕೊಂಡ ಪ.ಗೋ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡ ಕರೆಯವರಿಗೆ ಪ.ಗೋ ಪ್ರಶಸ್ತಿ ವಿತರಿಸಿ ಮಾತನಾಡುತ್ತಿದ್ದರು.
ಮಾಧ್ಯಮ ಗಳು ಪರಂಪರೆಯ ಕೊಂಡಿ ಯಾಗಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಕಾರ್ಯ ನಿರ್ವಹಿಸು ತ್ತಾ ಬಂದಿದೆ. ಮಂಗಳೂರು ವಿಶ್ವ ವಿದ್ಯಾನಿಲ ಯದ ಬೆಳವಣೆಗೆಯಲ್ಲಿ ಮಹತ್ವದ ಪಾತ್ರವಹಿಸಿದೆ.ಯುವ ಜನರಲ್ಲಿ ಕಲಿಕೆಯ ಬಗ್ಗೆ ಇರುವ ನಿರಾಸಕ್ತಿಯನ್ನು ದೂರ ಮಾಡಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಪಿ.ಎಲ್.ಧರ್ಮ ತಿಳಿಸಿದ್ದಾರೆ.
ಮಾಧ್ಯಮ ಗಳು ಪದ ಬಳಕೆಯ ಬಗ್ಗೆ ಎಚ್ಚರಿಕೆ ವಹಿಸಬೇಕು.ಸಮಾಜದಲ್ಲಿನ ವಿಕೃತಿಗಳನ್ನು ಮೀರಿ ಮಾಧ್ಯಮಗಳು ಸಮಾಜದ ಉತ್ತಮ ಭವಿಷ್ಯ ವನ್ನು ರೂಪಿಸುವ ಶಕ್ತಿ ಯನ್ನು ಹೊಂದಿದೆ ಈ ನಿಟ್ಟಿನಲ್ಲಿ ಮಾಧ್ಯಮಗಳು ಗಮನಹರಿಸಲು ಮನವಿ ಮಾಡುವುದಾಗಿ ಪ್ರೊ.ಪಿ. ಎಲ್.ಧರ್ಮ ತಿಳಿಸಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಹಿರಿಯ ಪತ್ರಕರ್ತ ದಿವಂಗತ ಪದ್ಯಾಣ ಗೋಪಾಲಕೃಷ್ಣರ ಒಡನಾಟದ ಬಗ್ಗೆ ಮಾತನಾಡಿ ಪತ್ರಕರ್ತರು ವರ್ತಮಾನ ಕಾಲದಲ್ಲಿದ್ದು ಭೂತಕಾಲದ ಜ್ಞಾನದೊಂದಿಗೆ ಭವಿಷ್ಯದ ಚಿಂತನೆ ಹೊಂದಿರಬೇಕಾದ ಅಗತ್ಯವಿದೆ ಎಂದರು. ಪ.ಗೋ ಪ್ರಶಸ್ತಿ ವಿಜೇತ ವಾರ್ತಾಭಾರತಿ ಪತ್ರಿಕೆಯ ವಿಶೇಷ ವರದಿಗಾರ ಇಸ್ಮಾಯಿಲ್ ಕಂಡಕೆರೆ ಮಾತನಾಡುತ್ತಾ,ಪತ್ರಿಕೆ ಗಳು ಗ್ರಾಮೀಣ ಪ್ರದೇಶದ ಸಮಸ್ಯೆ ಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕಾದ ಅಗತ್ಯವಿದೆಎಂದವರು ವಿವರಿಸಿದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆವಹಿಸಿದ್ದರು.
ಸಮಾರಂಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಆರ್,ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ ಬಂಟ್ವಾಳ,ಪದ್ಯಾಣ ಗೋಪಾಲಕೃಷ್ಣರವರ ಪುತ್ರ ವಿಶ್ವೇಶ್ವರ ಭಟ್ ,ಮ್ಯಾಮ್ ನ ಗೌರವಾಧ್ಯಕ್ಷ ವೇಣು ಶರ್ಮ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಡಸ್ಥಳ,ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತ,ಹರ್ಷ ಮೊದಲಾದ ವರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಪ್ರೆಸ್ ಕ್ಲಬ್ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!