ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಕೆಪಿಎಸ್‌ಕೆ ಶಾಲೆಯಲ್ಲಿ ಗಮನ ಸೆಳೆದ ಬೇಸಿಗೆ ಶಿಬಿರ

ಮುಲ್ಕಿ: ಗ್ರಾಮೀಣ ಪ್ರದೇಶದ ಅತಿಕಾರಿಬೆಟ್ಟು ವಿನ ಪಂಜಿನಡ್ಕ ಕೆಪಿಎಸ್‌ಕೆ ಸ್ಮಾರಕ ಅನುದಾನಿತ ಪ್ರೌಢಶಾಲೆಯು ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಅಧ್ಯಾಪಕರ ತಂಡ ಅತ್ಯಂತ ಕ್ರೀಯಾಶೀಲವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಿ ಗ್ರಾಮೀಣ ಪ್ರದೇಶದಲ್ಲಿ ಒಂದು ಮಾದರಿ ಶಾಲೆಯಾಗಿ ಹೆಸರು ಗಳಿಸಿದೆ, ಸುಮಾರು ಐದು ದಿನಗಳ ಕಾಲ ನಡೆದ ಶಿಬಿರದಲ್ಲಿ ಶಾಲಾ ವಿದ್ಯಾರ್ಥಿಗಳಲ್ಲದೆ ಬೇರೆ ಶಾಲೆಯ ವಿದ್ಯಾರ್ಥಿಗಳ ಹಾಗೂ ಮುಂಬೈ ವಿದ್ಯಾರ್ಥಿಗಳು ಸೇರಿ 45 ವಿದ್ಯಾರ್ಥಿಗಳು ಬಾಗವಹಿಸಿದ್ದರು.


ಶಾಲೆಯಲ್ಲಿ ಮುಖ್ಯ ಕಲಾ ಶಿಕ್ಷಕರಾಗಿರುವ ವೆಂಕಿ ಫಲಿಮಾರ್ ರವರು ಶಿಬಿರದಲ್ಲಿ ಮುಖ್ಯವಾಗಿ ಮಕ್ಕಳಿಗೆ ಪೇಪರ್ ಕ್ರಾಪ್ಟ್, ಅವೆ ಮಣ್ಣಿನ ಕಲಾಕೃತಿ ರಚಿಸುವ ಬಗ್ಗೆ ಮಾಹಿತಿ ನೀಡಿದ್ದು ಬಳಿಕ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಶ್ಲೋಕ, ಭಾರತೀಯ ಸಂಸ್ಕೃತಿ ಬಗ್ಗೆ ಮಕ್ಕಳಿಗೆ ತಿಳಿ ಹೇಳಲಾಗಿದೆ.
ಕಲಾಕೃತಿಗಳಲ್ಲಿ ಮುಖ್ಯವಾಗಿ ಹಳೆಯ ಬಾಟಲ್ ವಿವಿಧ ಬಣ್ಣಗಳಿಂದ, ಹೂವಿನ ಚಿತ್ರಗಳಿಂದ ಆಕರ್ಷಿಣೀಯವಾದರೆ, ಹಾಳಾದ ತೆಂಗಿನ ಕಾಯಿ ಮತ್ತು ಗೆರಟೆ ಒಂದು ಮನುಷ್ಯನನ್ನು ಹೋಲುವ ರೂಪ ಪಡೆದಿದೆ, ಹಳೆಯ ಪೇಪರ್ ಬುಲೆಟ್ ನ ಪ್ರತಿಕೃತಿ ಹೊಂದಿದರೆ, ಹಳೆಯ ರಟ್ಟು ರಕ್ಕಸನ ರೂಪ ಪಡೆದಿದೆ, ಸ್ಪಂಜ್ ವಿವಿಧ ಗೊಂಬೆಯ ರೂಪ ಪಡೆದು ಆಕರ್ಷಣೀಯ ಅಲ್ಲದೆ ಮಕ್ಕಳಿಗೆ ಶ್ಲೋಕ ಪಾಠ, ಪ್ರಾಣಯಾಮ ಮತ್ತಿತರ ವಿಷಯಗಳ ಬಗ್ಗೆ ತರಬೇತಿ ನೀಡಲಾಯಿತು.
ಸರಕಾರಿ ಶಾಲೆಗಳೂ ಮುಚ್ಚುತ್ತಾ ಬಂದರೂ ಈ ಅನುದಾನಿತ ಶಾಲೆಯನ್ನು ಶಾಲಾ ಆಡಳಿತ ಮಂಡಳಿ ಹಳೆ ವಿಧ್ಯಾರ್ಥಿ ಸಂಘ ಶಾಲಾ ಶಿಕ್ಷಕರ ಹಾಗೂ ದಾನಿಗಳ ಸಹಕಾರದಿಂದ ಬೇಕು ಬೇಕಾದ ಸವಲತ್ತುಗಳನ್ನು ಉಚಿತವಾಗಿ ನೀಡಿ ಮಾದರಿಯನ್ನಾಗಿ ರೂಪಿಸಿ, ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವಂತೆ ನೋಡಿಕೊಳ್ಳುತ್ತಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!