ಜನ ಮನದ ನಾಡಿ ಮಿಡಿತ

Advertisement

ಸಸಿಹಿತ್ಲು: ಮರುವಾಯಿ ಹೆಕ್ಕಲು ಹೋಗಿ ಅಳಿವೆಯಲ್ಲಿ ನಿರುಪಾಲಾದ ಯುವಕನಿಗೆ ತೀವ್ರ ಹುಡುಕಾಟ

ಮುಲ್ಕಿ: ಇಲ್ಲಿನ ಕೊಳಚಿ ಕಂಬಳ ಬೀಚ್ ಬಳಿಯಿಂದ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಸಮುದ್ರದ ಅಳಿವೆ ಬಾಗಿಲಿನಲ್ಲಿ ಬಜಪೆಯ ಅದ್ಯಪಾಡಿಯಿಂದ ಬಂದ ಯುವಕರ ತಂಡ ಮರುವಾಯಿ ಚಿಪ್ಪು ಹೆಕ್ಕಲು ಹೋಗಿ ನೀರುಪಾಲಾದ ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಶ್ (24) ಪತ್ತೆಗಾಗಿ ಎರಡನೇ ದಿನವೂ ತೀವ್ರ ಶೋಧ ಕಾರ್ಯ ನಡೆದರೂ ಯುವಕ ಪತ್ತೆಯಾಗಿಲ್ಲ

ಬೆಳಗ್ಗಿನಿಂದಲೇ ರಾಜ್ಯ ವಿಪತ್ತು ಸ್ಪಂದನಾ ಪಡೆ (ಎಸ್ ಡಿ ಆರ್ ಎಫ್) ಮತ್ತು ಉಡುಪಿಯ ಅಪದ್ಬಾಂಧವ ಈಜುಗಾರರಾದ ಈಶ್ವರ್ ಮಲ್ಪೆ ತಮ್ಮ ತಂಡದೊಂದಿಗೆ ಸಸಿಹಿತ್ಲು ಮುಂಡಾ ಬೀಚ್ ಸಮುದ್ರದ ಅಳಿವೆ ಬಾಗಿಲಿನಲ್ಲಿ ಅನೇಕ ಸಾಹಸ ನಡೆಸಿ ನೀರಿನಲ್ಲಿ ಮುಳುಗಿ ನೀರು ಪಾಲಾದವನನ್ನು ಹುಡುಕಲು ಪ್ರಯತ್ನ ಮಾಡಿದರು ಸಫಲವಾಗಿಲ್ಲ. ಸ್ಥಳದಲ್ಲಿ ಹೆಜ್ಮಾಡಿ ಕಾವಲು ಪಡೆಯ ಸಿಬ್ಬಂದಿ, ಸುರತ್ಕಲ್ ಪೊಲೀಸರು ಹಾಗೂ ಕುತೂಹಲದಿಂದ ಆಗಮಿಸಿದವರು ಬಾರಿ ಸಂಖ್ಯೆಯಲ್ಲಿ ನೆರೆದಿದ್ದರು.
ನೀರು ಪಾಲಾದ ಅಭಿಲಾಶ್ ಮನೆಯವರ ರೋಧನ ಮುಗಿಲು ಮುಟ್ಟಿದ್ದು ಸ್ಥಳದಲ್ಲಿ ಮೌನ ವಾತಾವರಣ ನೆಲೆಸಿದೆ.
ಮಂಗಳೂರು ರೈಲ್ವೇ ಯಲ್ಲಿ ಗುತ್ತಿಗೆದಾರನ ಕೆಲಸ ನಿರ್ವಹಿಸುತ್ತಿದ್ದ ಅಭಿಲಾಶ್ ಉತ್ತಮ ಈಜುಗಾರನಾಗಿದ್ದರೂ ಮಿತ್ರರ ಪ್ರಾಣ ಉಳಿಸಲು ಹೋಗಿ ನೀರು ಪಾಲಾಗಿರುವುದು ದುರದೃಷ್ಟಕರವಾಗಿದೆ ಎಂದು ಸ್ಥಳೀಯರು ಬೇಸರದಿಂದ ಹೇಳುತ್ತಿದ್ದಾರೆ.


ಬಜಪೆ ಸಮೀಪದ ಆದ್ಯಪಾಡಿಯ ಸುಮಾರು ಹತ್ತು ಮಂದಿಯ ಯುವಕರ ತಂಡ ಮರುವಾಯಿ ಚಿಪ್ಪು ಮತ್ತು ಏಡಿ ಹಿಡಿಯಲು ಮುಲ್ಕಿಯ ಕೊಳಚಿ ಕಂಬಳ ಬೀಚ್ ಬಳಿಗೆ ಬಂದಿದ್ದು , ಶಾಂಭವಿ ನದಿಯಲ್ಲಿ ನೀರಿನ ಇಳಿತ ವಿದ್ದ ಕಾರಣ ಸುಮಾರು ಎರಡು ಕಿಲೋಮೀಟರ್ ನಡೆದುಕೊಂಡು ಸಸಿಹಿತ್ಲು ಮುಂಡಾ ಬೀಚ್ ಅಳಿವೆ ಬಾಗಿಲು ಬಳಿ ನೀರಿನ ಆಳ ಗೊತ್ತಾಗದೆ ಈಜು ಬಾರದ ಧನುಷ್ ಮತ್ತು ಜೀವನ್ ಎಂಬವರು ನೀರಿನಲ್ಲಿ ಮುಳುಗಿದ್ದು ಅವರನ್ನು ರಕ್ಷಿಸಲು ಈಜಲು ಗೊತ್ತಿದ್ದ ಅಭಿಲಾಶ್ ಮುಂದಾಗಿದ್ದು ಅವರನ್ನು ರಕ್ಷಿಸುವ ಯತ್ನದಲ್ಲಿ ಉಳಿದವರ ಕಣ್ಣೆದುರೇ
ನಿರುಪಾಲಾಗಿದ್ದಾನೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!