ಮುಲ್ಕಿ: ಬಪ್ಪನಾಡು ಏಳಿಂಜೆ ಲೋಕೋಪಯೋಗಿ ರಸ್ತೆಯ ಪಳ್ಳಿಗುಡ್ಡೆ ಚಡಾವು ಜಂಕ್ಷನ್ ಬಳಿ ಕಾರಿಗೆ ಪಿಕಪ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶ ಪಾರಾಗಿದ್ದಾರೆ

ಮುಲ್ಕಿಯ ಕಾರ್ನಾಡ್ ನಿಂದ ವೆಂಕಟ್ರಮಣ ದೇವಸ್ಥಾನದ ಕಡೆಗೆ ಹೋಗುತ್ತಿದ್ದ ತಂಪು ಪಾನೀಯ ಲೈನ್ ಸೇಲ್ ಪಿಕಪ್ ಚಾಲಕನ ನಿರ್ಲಕ್ಷ ಚಾಲನೆಯಿಂದ ಪಡುಬಿದ್ರೆ ಸಮೀಪದ ಅಡ್ವೆಯಿಂದ ಮುಲ್ಕಿ ಕಡೆಗೆ ಬರುತ್ತಿದ್ದ ಕಾರಿಗೆ ಪಳ್ಳಿಗುಡ್ಡೆ ಚಡಾವು ಜಂಕ್ಷನ್ ಬಳಿ ಡಿಕ್ಕಿ ಹೊಡೆದಿದೆ
ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗಕ್ಕೆ ಹಾನಿಯಾಗಿದ್ದು ಸ್ಥಳದಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಯಿತು.
ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.



