ಜನ ಮನದ ನಾಡಿ ಮಿಡಿತ

Advertisement

ರೈತರ ಜೀವನಾಡಿ ಮಂಡ್ಯ ಮೈಶುಗರ್ ಕಾರ್ಖಾನೆ ಪುನರಾರಂಭ: ಕಬ್ಬು ನುರಿಸುವ ಕಾರ್ಯಕ್ಕೆ ಸಿಕ್ತು ಚಾಲನೆ

ಮಂಡ್ಯ: ಮಂಡ್ಯದ ಮೈಶುಗರ್ ಕಾರ್ಖಾನೆ, ಸರ್ಕಾರಿ ಸ್ವಾಮ್ಯದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ. ಇಲ್ಲಿ ಪ್ರಸಕ್ತ ಸಾಲಿನ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಕಾರ್ಖಾನೆ ಪುನರಾರಂಭದ ಭರವಸೆಯನ್ನು ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಕೊಟ್ಟಿತ್ತು. ಅದರಂತೆಯೇ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿಎಂ ಸಿದ್ದರಾಮಯ್ಯ 50 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದರು. ಅನುದಾನ ಬಿಡುಗಡೆಯಾದ ವಾರದಲ್ಲಿಯೇ ಕಾರ್ಖಾನೆ ಬಾಯ್ಲರ್​ಗೆ ಅಗ್ನಿಸ್ಪರ್ಶವನ್ನೂ ಮಾಡಲಾಗಿತ್ತು. ಇದೀಗ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಕಾರ್ಖಾನೆ ಅಧಿಕೃತವಾಗಿ ಪುನರಾರಂಭವಾಗಿದೆ.

ಕಾರ್ಖಾನೆ ಆವರಣದಲ್ಲಿ ಮೊದಲು ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ್ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಸಚಿವ ಶಿವಾನಂದ ಪಾಟೀಲ್ ಮಾತನಾಡಿ, “ಪ್ರಸಕ್ತ ಸಾಲಿನ ಹಂಗಾಮಿನಲ್ಲಿ ಪ್ರತಿದಿನ 3 ಸಾವಿರ ಟನ್ ಕಬ್ಬು ನುರಿಸುವ ಗುರಿ ಇದೆ. ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯಕ್ಕೆ ಕೆಲವು ದಿನ ಟರ್ಬೈನ್ ಸಮಸ್ಯೆಯಿಂದ ತಡವಾಯಿತು. ಗುರುವಾರ ಮತ್ತು ಶುಕ್ರವಾರ 1,500 ರಿಂದ 2,000 ಟನ್ ಕಬ್ಬು ನುರಿಸಲಾಗುವುದು. ಕಾಲಕ್ರಮೇಣ 3 ಸಾವಿರ ಟನ್​ನಿಂದ 5 ಸಾವಿರ ಟನ್​ವರೆಗೂ ನುರಿಯುವ ಕೆಲಸ ನಡೆಯಲಿದೆ. ರೈತರಿಗೆ ಎಫ್‌ಆರ್‌ಪಿ ಪ್ರಕಾರ ದರ ನೀಡಿ ಕಬ್ಬು ಖರೀದಿಸಲಾಗುವುದು. ಕಳೆದ ಬಾರಿ ಕಡಿಮೆ ರಿಕವರಿ ಇದ್ದರೂ ರೈತರಿಗೆ 2,800 ರೂ ನೀಡಲಾಗಿದೆ” ಎಂದರು.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, “ಸರ್ಕಾರದ ಬೆಂಬಲದಿಂದ ಕಾರ್ಖಾನೆ ಪ್ರಾರಂಭವಾಗಿದೆ. ಕಬ್ಬು ಅರೆಯುವ ಕಾರ್ಯ ಹೆಚ್ಚು ನಡೆಯುತ್ತದೆ. ಮುಂದಿನ ದಿನಗಳಲ್ಲಿ ಕಾರ್ಖಾನೆ ಉನ್ನತ ಮಟ್ಟದಲ್ಲಿ ನಡೆಯಲಿದೆ” ಎಂದರು.

“ಮೈಶುಗರ್​ನಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲವಿದೆ. ಅವುಗಳನ್ನು ಸರಿಪಡಿಸಿಕೊಂಡು ಹೋದರೆ ಮುಂದೆ ಯಾವುದೇ ಸಮಸ್ಯೆ ಬರಲ್ಲ. 40 ಕೋಟಿ ರೂ ಕರೆಂಟ್ ಬಿಲ್ ಬಾಕಿಯ ಬಗ್ಗೆ ರಾಜ್ಯದ ಇಂಧನ ಸಚಿವರಿಗೆ ಪತ್ರ ಬರೆದು ಮನ್ನಾ ಮಾಡುವಂತೆ ಮನವಿ ಮಾಡುತ್ತೇನೆ” ಎಂದು ಸಂಸದೆ ಸುಮಾಲತಾ ತಿಳಿಸಿದರು.

ಶಾಸಕ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇ ಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಎನ್. ಯತೀಶ್ ಸೇರಿ ರೈತ ನಾಯಕರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!