ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಜಮೀಯ್ಯತುಲ್ ಫಲಾಹ್, ರೋಟರಿ ಕ್ಲಬ್ ನಿಂದ “ಮೆಹ್’ಫಿಲೇ ಈದ್”; ಝಕರಿಯಾ ಜೋಕಟ್ಟೆ, ಡಾ. ಮೋಹನ್ ಆಳ್ವ, ರೋಹನ್ ಮೊಂತೇರೋ ಅವರಿಗೆ ಈದ್ ಅವಾರ್ಡ್

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ, ರೋಟರಿ ಕ್ಲಬ್ ಬಂಟ್ವಾಳ, ಉಪ್ಪಿನಂಗಡಿ, ಬಂಟ್ವಾಳ ಟೌನ್ ಹಾಗೂ ವಿಟ್ಲ ಘಟಕದ ಸಹಯೋಗದಲ್ಲಿ ಮೆಹ್’ಫಿಲೇ ಈದ್ ಕಾರ್ಯಕ್ರಮವು ಮೇ 17 ಶುಕ್ರವಾರ ಸಂಜೆ 05.30ಕ್ಕೆ ಮಾಣಿ ಜನಪ್ರಿಯ ಗಾರ್ಡನ್ಸ್ ನಲ್ಲಿ ನಡೆಯಲಿದೆ.

ಎನ್ನಾರೈ ಉದ್ಯಮಿ, ಸಂಘಟಕ ಝಕರಿಯಾ ಜೋಕಟ್ಟೆ ಅಲ್ ಮುಝೈನ್, ಶಿಕ್ಷಣ ಹರಿಕಾರ, ಸಾಂಸ್ಕೃತಿಕ ಸಂಘಟಕ ಡಾ. ಎಂ. ಮೋಹನ್ ಆಳ್ವ, ಮಂಗಳೂರು ಉದ್ಯಮಿ, ಸೇವಾಕರ್ತೃ ರೋಹನ್ ಮೊಂತೇರೋ ಅವರಿಗೆ ಈದ್ ಅವಾರ್ಡ್ ನೀಡಿ ಗೌರವಿಸಲಾಗುವುದು. ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಈದ್ ಸಂದೇಶ ನೀಡುವರು. ರೋಟರಿ ಜಿಲ್ಲಾ ನಿಯೋಜಿತ ಗವರ್ನರ್ ವಿಕ್ರಮ್ ದತ್ತ ಪ್ರಶಸ್ತಿ ವಿತರಿಸುವರು. ಸುಲ್ತಾನ್ ಗೋಲ್ಡ್ ಎಂ.ಡಿ. ಡಾ. ಅಬ್ದುಲ್ ರವೂಫ್, ಜನಪ್ರಿಯ ಗ್ರೂಪ್ಸ್ ಎಂ.ಡಿ. ಡಾ. ಅಬ್ದುಲ್ ಬಶೀರ್ ವಿ.ಕೆ., ಜಮೀಯ್ಯತುಲ್ ಫಲಾಹ್ ಜಿಲ್ಲಾಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಹಾಗೂ ಡ್ರೀಮ್ ಎಸೋಸಿಯೇಟ್ಸ್ ಎಂ.ಡಿ. ಝುಬೈರ್ ಬುಳೇರಿಕಟ್ಟೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಇಬ್ರಾಹಿಂ ಬಾತಿಷ ತಂಡದ ಗಾಯನ, ಕೇರಳ ಕಣ್ಣೂರು ಕಲಾ ವೇದಿ ತಂಡದ ದಫ್, ಕೋಲ್ಕಳಿ, ಮುಟ್ಟ್, ಸೂಫಿ, ಅರಬಿಕ್ ನೃತ್ಯಗಳ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ ಮುಝೈನ್ ಜುಬೈಲ್, ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್, ಡ್ರೀಮ್ ಎಸೋಸಿಯೇಟ್ಸ್, ಜನಪ್ರಿಯ ಗಾರ್ಡನ್ಸ್, ರಿಫಾಯಿ ಟ್ರೇಡಿಂಗ್ ಕಂಪೆನಿ ಹಾಗೂ ಆನಿಯಾ ದರ್ಬಾರ್ ಗ್ರೂಪ್ ಆಫ್ ಹೋಟೆಲ್ಸ್ ಸಹಕಾರ ನೀಡಲಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!