ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮೇ 17ರಿಂದ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ

ಉಡುಪಿ: 1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್‌ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ ಗ್ಯಾಲರಿಯಲ್ಲಿ ಮೇ 17ರಿಂದ 19ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅದಿತಿ ಆರ್ಟ್ ಗ್ಯಾಲರಿಯ ಆಡಳಿತ ವಿಶ್ವಸ್ಥ ಡಾ. ಕಿರಣ್ ಆಚಾರ್ಯ ತಿಳಿಸಿದ್ದಾರೆ.

ಉಡುಪಿ ಕುಂಜಿಬೆಟ್ಟುವಿನ ಗ್ಯಾಲರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೂಲ ಪ್ರತಿಗಳನ್ನು ಬಹು ಪ್ರತಿಗಳನ್ನಾಗಿ ಮಾಡುವ ಸಂಪ್ರದಾಯ ಬದ್ಧ ಕಲೆಯೇ ಕಲ್ಲಚ್ಚು. ಇದೊಂದು ಪುರಾತನ ಮುದ್ರಣ ತಂತ್ರಗಾರಿಕೆ. ಕಲ್ಲಿನ ಮೇಲೆ ಚಿತ್ರಿಸಿ ಅದನ್ನು ರಾಸಾಯನಿಕ ಪ್ರಕ್ರಿಯೆಗೆ ಒಳಪಡಿಸಿ ಅದರ ಮೂಲಕ ಚಿತ್ರ ಪ್ರತಿಗಳನ್ನು ತೆಗೆಯುವ ಕಲೆ. ಪುರಾತನ ಕಲ್ಲಚ್ಚು ಕಲಾಕೃತಿಗಳ ಸಂರಕ್ಷಣೆ, ಅಧ್ಯಯನ ಮತ್ತು ಸಾಮಾಜಿಕ ಬದಲಾವಣೆಗಳ ದಾಖಲೀಕರಣ ಈ ಪ್ರದರ್ಶನದ ಉದ್ದೇಶವಾಗಿದೆ ಎಂದರು.
ಮೇ 17ರಂದು ಬೆಳಿಗ್ಗೆ 10.30ಕ್ಕೆ ಮುದ್ರಣ ಕ್ಷೇತ್ರದ ಉದ್ಯಮಿ ಮಂಗಳೂರಿನ ನೇಮಿರಾಜ್ ಶೆಟ್ಟಿ ಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾವಿದ ಡಾ.ಜನಾರ್ದನ ಹಾವಂಜೆ ಭಾಗವಹಿಸಲಿದ್ದಾರೆ. ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಕಲಾಕೃತಿಗಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ಯಾಲರಿಯ ವಿಶ್ವಸ್ಥರಾದ ಶ್ರೀನಿವಾಸ, ಪ್ರವೀಣಾ ಮೋಹನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!