ಜನ ಮನದ ನಾಡಿ ಮಿಡಿತ

Advertisement

ಸರಣಿ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

ಹುಣಸೂರು: ತಾಲೂಕಿನ ಅರಸು ಕಲ್ಲಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ, ಘಟನೆಯಲ್ಲಿ ಎರಡು ಬಸ್‌ಗಳು ಹಾಗೂ ಎರಡು ಕಾರುಗಳಿಗೆ ತೀವ್ರ ಜಖಂ ಆಗಿದೆ.

ಮೈಸೂರು-ಬಂಟ್ವಾಳ ಹೆದ್ದಾರಿ-275ರ ಅರಸು ಕಲ್ಲಹಳ್ಳಿ ಗೇಟ್ ಬಳಿಯಲ್ಲಿ ಘಟನೆ ನಡೆದಿದ್ದು, ಮೈಸೂರು ತಾಲೂಕಿನ ಹೂಟಗಳ್ಳಿಯ ಎಸ್‌ಆರ್‌ಎಸ್ ಕಾಲೋನಿಯ ಲೇ.ಬೈರಪ್ಪರ ಪುತ್ರ , ಕೂಲಿ ಕಾರ್ಮಿಕ ಕರಿಯಪ್ಪ(40) ಮೃತಪಟ್ಟಾತ, ಇವರಿಗೆ ಪತ್ನಿ, ಪುಟ್ಟ ಮಕ್ಕಳಿದ್ದಾರೆ.

ಕರಿಯಪ್ಪ ಹುಣಸೂರು ತಾಲೂಕಿನ ಅತ್ತಿಕುಪ್ಪೆಯಲ್ಲಿ ಬುಧವಾರ ನಡೆದ ಗ್ರಾಮದ ಹಬ್ಬದಲ್ಲಿ ಬಾಗವಹಿಸಿ ಸಂಜೆ 6.30ರ ವೇಳೆಗೆ ವಾಪಸ್ ಆಗುತ್ತಿದ್ದ ವೇಳೆ ಅರಸು ಕಲ್ಲಹಳ್ಳಿ ಬಳಿ ಹುಣಸೂರು ಡಿಪೋಗೆ ಸೇರಿದ ಬಸ್ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಿಂದ ಗಾಬರಿಗೊಂಡ ಬಸ್ ಚಾಲಕ ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬರುತ್ತಿದ್ದ ಇನ್ನೋವಾ ಕಾರು ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಇದರ ಹಿಂದೆ ಬರುತ್ತಿದ್ದ ಬೆಂಜ್ ಕಾರು ಇನ್ನೋವಾ ಕಾರಿಗೆ ಹಾಗೂ ಹಿಂದೆ ಬರುತ್ತಿದ್ದ ಮತ್ತೊಂದು ಸರಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎಲ್ಲಾ ವಾಹನಗಳಿಗೂ ಜಖಂಗೊಂಡಿದ್ದು. ಎಲ್ಲರೂ
ಸಣ್ಣಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!