ಜನ ಮನದ ನಾಡಿ ಮಿಡಿತ

Advertisement

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಉಡುಪಿ: ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ.

ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು ಸ್ವಾಮಿ ದೈವದ ನೇಮೋತ್ಸವ ಏರ್ಪಡಿಸಲಾಗಿತ್ತು. ಇದ್ದಕ್ಕಿದ್ದಂತೆ ನಡುರಾತ್ರಿ ವ್ಯಾಪಕ ಮಳೆ ಆರಂಭವಾಯಿತು. ಸುರಿಯುವ ಮಳೆಯಲ್ಲೇ ದೈವ ನರ್ತಕ ರವಿ ಪಡ್ಡಮ್ ಅವರು ಗಗ್ಗರಸೇವೆ ನಡೆಸಿಕೊಟ್ಟರು. ಮಳೆಯಲ್ಲೇ ನಡೆಯುತ್ತಿರುವ ನೇಮೋತ್ಸವದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ.
ದೈವರಾಧನೆಯ ಬಗ್ಗೆ ಕರಾವಳಿ ಜನರಲ್ಲಿ ಇರುವ ಶ್ರದ್ದೆ ಈ ಮೂಲಕ ವ್ಯಕ್ತವಾಗಿದೆ. ಆರಾಧನೆಯಲ್ಲಿ ಯಾವುದೇ ಲೋಪ ಬಾರದಂತೆ ದೈವರಾಧಕರು ಮತ್ತು ಜನರು ಈ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಅಂದ ಹಾಗೆ ತುಳುನಾಡಿನಲ್ಲಿ ಈ ವರ್ಷದಲ್ಲಿ ನಡೆಯುವ ಬಬ್ಬು ಸ್ವಾಮಿ ದೈವದ ಕೊನೆಯ ಕೋಲ ಇದು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!