ಜನ ಮನದ ನಾಡಿ ಮಿಡಿತ

Advertisement

ಬಂಡಾಯದ ಹೊಡೆತ ಕಾಂಗ್ರೆಸ್ ಪಕ್ಷಕ್ಕೆ ಬೀಳಲ್ಲ: ಮಧು ಬಂಗಾರಪ್ಪ

ಉಡುಪಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಬಂಡಾಯವಾಗಿ ಸ್ಪರ್ಧಿಸಿರುವವರಿಂದ ಯಾವುದೇ ರೀತಿಯ ಹೊಡೆತ ಬೀಳಲ್ಲ. ನೈರುತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಡಾ.ಕೆ.ಕೆ.ಮಂಜುನಾಥ್ ಕುಮಾರ್ ಸೇರಿದಂತೆ ಎಲ್ಲ ಆರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತು ನಮ್ಮ ಆರು ಅಭ್ಯರ್ಥಿಗಳು ಗೆಲ್ಲಬೇಕು ಎಂದು ಮುಖ್ಯ ಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಅದರಂತೆ ನಮ್ಮ ಎಲ್ಲ ವರಿಷ್ಠರು, ನಾಯಕರು ಚುನಾವಣೆಯಲ್ಲಿ ತೊಡಗಿಸಿ ಕೊಂಡಿದ್ದಾರೆ ಎಂದರು.
ಬಂಡಾಯ ಎಂಬುದು ಎಲ್ಲ ಪಕ್ಷದಲ್ಲೂ ಇರುತ್ತದೆ. ಬಿಜೆಪಿಯಲ್ಲೂ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಇಂದು ವಿಶ್ವಾದ ಮೇಲೆಯೇ ಅಧಿಕಾರಕ್ಕೆ ಬಂದಿದೆ. ಎಲ್ಲ ಐದು ಗ್ಯಾರಂಟಿ ಗಳನ್ನು ಅನುಷ್ಠಾನ ಮಾಡಲಾಗಿದೆ. ಈ ಯೋಜನೆ ಲೋಕಸಭಾ ಹಾಗೂ ಈ ವಿಧಾನ ಪರಿಷತ್ ಚುನಾವಣೆಗೂ ಸಹಾಯ ಆಗುತ್ತದೆ ಎಂಬ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಡಾ.ಕೆ.ಕೆ.ಮಂಜುನಾಥ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಮಮತಾ ಗಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಐವನ್ ಡಿಸೋಜ, ಹರೀಶ್ ಕಿಣಿ, ರಮೇಶ್ ಕಾಂಚನ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!