ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸ್ವರ್ಣ ನದಿಯ ಸೇತುವೆ ದಂಡೆಗೆ ಡಿಕ್ಕಿ ಹೊಡೆದ ಬಸ್: ದೊಡ್ಡ ದುರಂತದಿಂದ ಪ್ರಯಾಣಿಕರು ಪಾರು

ಉಡುಪಿ: ಖಾಸಗಿ ಬನ್ನೊಂದು ಸೇತುವೆ ಬದಿಯ ದಂಡೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಯಾಣಪುರ ಸೇತುವೆಯಲ್ಲಿ ಸಂಭವಿಸಿದೆ. ಬಸ್ ನದಿಯಲ್ಲಿ ಮುಳುಗುವ ಅಪಾಯವಿದ್ದು, ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಬಹಳ ದೊಡ್ಡ ದುರಂತದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುವ ಬಸ್ ಸ್ವರ್ಣ ನದಿಯ ಕಲ್ಯಾಣಪುರ ಸೇತುವೆಯ ಗರ್ಡ‌ರ್ ರಭಸದಿಂದ ಗುದ್ದಿದೆ. ಇದರ ಪರಿಣಾಮ ಸುರಕ್ಷಾ ಗರ್ಡರ್ ಮುರಿದಿದ್ದು, ಬಸ್ ಅಂಚಿನಲ್ಲಿ ನಿಂತಿದೆ. ಪ್ರಯಾಣಿಕರು ನದಿಗೆ ಬಿದ್ದು ಮುಳುಗಡೆ ಆಗುವ ಸನ್ನಿವೇಶದ ಅಪಾಯದಿಂದ ಪಾರಾಗಿದ್ದಾರೆ.
ಅದೇ ಸಮಯ ಸೇತುವೆ ಕೆಳಗಡೆ ದೋಣಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಶಂಕರ ಎಂಬವರ ಮೇಲೆ ಸಿಮೆಂಟು ಕಂಬದ ತುಂಡು ಮುರಿದು ಬಿದ್ದಿದೆ. ಅವರ ಕೈಗೆ ಗಾಯವಾಗಿದ್ದು ಚಿಕಿತ್ಸೆ ಪಡೆದಿದ್ದಾರೆ. ಕಲ್ಯಾಣಪುರ ಸೇತುವೆ 1963ರಲ್ಲಿ ನಿರ್ಮಾಣವಾಗಿದ್ದು 6 ದಶಕಗಳಷ್ಟು ಹಳೆಯದಾಗಿದ್ದು ಇಲ್ಲಿ ಬಹಳಷ್ಟು ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿವೆ.
ಸೇತುವೆಯ ಅಡಿಯಲ್ಲಿ ಅಲ್ಲಲ್ಲಿ ಕಾಂಕ್ರೀಟ್ ಬಿರುಕು ಬಿಟ್ಟಿದೆ. ಸೇತುವೆಯನ್ನು ಅಡಿ ಭಾಗದಲ್ಲೂ ದುರಸ್ಥಿ ಮಾಡಬೇಕಾಗಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!