ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಕರಾಡ ಬ್ರಾಹ್ಮಣರ ಯಶಸ್ವಿ ಉತ್ತರ ಭಾರತ ಯಾತ್ರೆ; ಸಮಾರೋಪ…

ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸುಧಾರಕ ಸಂಘ ಗುಂಡ್ಯಡ್ಕ,ಮೂಡಬಿದಿರೆ ಹಾಗೂ ಆತ್ಮನಿರ್ಬರ ಟೂರ್ಸ್ ಮಾರ್ಗದರ್ಶನದಲ್ಲಿ ವೇದಮೂರ್ತಿ ಗಿರಿಧರ ಭಟ್ ಇವರ ಉಸ್ತುವಾರಿಯಲ್ಲಿ, ರಾಮಚಂದ್ರ ಪಂಡಿತ್ ಮತ್ತು ಸುನಿಲ್ ಗರ್ದೆ, ಶ್ರೀಕಾಂತ ರಾವ್ ಕಾರ್ಕಳ ಇವರ ಸಹಕಾರದೊಂದಿಗೆ ಸಾಗುತ್ತಿರುವ ಕರಾಡರ ಉತ್ತರ ಭಾರತ ಯಾತ್ರೆಯು ಒಟ್ಟು 15 ದಿನಗಳ ಕಾಲ ಉತ್ತರ ಭಾರತದ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವನ್ನು ಸಂದರ್ಶಿಸಿ, ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಸಿ ಮಂಗಳೂರು ಕಡೆ ಪ್ರಯಾಣ ಬೆಳೆಸಿತು.
ದಿನಾಂಕ 6.6.2024 ರಂದು ಮುಂಜಾನೆ ಮಂಗಳೂರಿನ ರೈಲು ಪ್ರಯಾಣದ ಮುಖಾಂತರ ಹೊರಟ ಸುಮಾರು 100 ಮಂದಿಯ ತಂಡ ಪ್ರಯಾಗರಾಜ ತಲುಪಿ ಅಲ್ಲಿ ವಿವಿಧ ತೀರ್ಥಕ್ಷೇತ್ರಗಳ ಸಂದರ್ಶನ ನಡೆಸಿ, ನಂತರ ಅಯೋಧ್ಯ ಶ್ರೀ ರಾಮನ ದರ್ಶನ ದರ್ಶನ ಪೂರೈಸಿ, ಬಳಿಕ ಕಾಶಿ ತಲುಪಿದ್ದು, ಅಲ್ಲಿ ಗಂಗಾ ಆರತಿ ವೀಕ್ಷಣೆ ಕಾಶಿ ವಿಶ್ವನಾಥ ದರ್ಶನ ಮಾಡಿ ಆ ಬಳಿಕ ನಳಂದ, ಗಯಾ,ಜಾರ್ಖಂಡ್, ಅಲ್ಲಿಂದ ದೆಹಲಿ ತಲುಪಿ ಇದೀಗ ಮಂಗಳೂರು ಕಡೆಗೆ ಪ್ರಯಾಣ ಬೆಳೆಸಿದೆ ಜೂನ್ 20ರ ಮಧ್ಯಾಹ್ನದ ವೇಳೆಗೆ ಮಂಗಳೂರಿಗೆ ತಲುಪಲಿದೆ.
ಹಿರಿಯ ನಾಗರಿಕರು ಸೇರಿದಂತೆ 100 ಮಂದಿ ಕರಾಡ ಬ್ರಾಹ್ಮಣ ಸಮಾಜ ಬಾಂಧವರು, ಈ ಯಾತ್ರೆಯಲ್ಲಿ ಪಾಲ್ಗೊಂಡು ಕಾಶಿ ಯಾತ್ರೆ ಸೇರಿದಂತೆ ಮನದ ಇಚ್ಛೆಯನ್ನ ಪೂರೈಸಿಕೊಂಡರು.


ಎಂಟು ಮಂದಿ ಬಾಣಸಿಗರಿಂದ ಶುದ್ಧ ಮಂಗಳೂರು ಶೈಲಿಯ ಸಸ್ಯಾಹಾರ ಉಪಚಾರ, ನುರಿತ ತಂಡದಿಂದ ಮಾರ್ಗದರ್ಶನ ಮತ್ತು ವಿವರಣೆ, ಹವಾ ನಿಯಂತ್ರಿತ ಬಸ್ಸು ಮತ್ತು ವಸತಿ ವ್ಯವಸ್ಥೆ, ಹಾಗೂ ಹವಾ ನಿಯಂತ್ರಿತ ರೈಲು ಸಂಚಾರ ಎಲ್ಲವೂ ಅಚ್ಚುಕಟ್ಟಾಗಿತ್ತು ಎಂಬುದು ಯಾತ್ರಾರ್ತಿಗಳ ಅಭಿಪ್ರಾಯವಾಗಿತ್ತು, ನೂರು ಯಾತ್ರಾರ್ತಿಗಳಲ್ಲಿ ಹೆಚ್ಚಿನ ಸಂಖ್ಯೆಯ ಯಾತಾರ್ತಿಗಳು ಹಿರಿಯ ನಾಗರಿಕರಾಗಿದ್ದು , ಸಣ್ಣಪುಟ್ಟ ಆರೋಗ್ಯ ಸಮಸ್ಯೆಯನ್ನು ಹೊರತುಪಡಿಸಿ ಯಾರಿಗೂ ಆರೋಗ್ಯ ಸಮಸ್ಯೆಯಾಗಿಲ್ಲ.
ಯಾತ್ರೆಯ ಉಸ್ತುವಾರಿ ಗಿರಿಧರ ಭಟ್ಟರು ಮಾತನಾಡಿ ಕರಾಡ ಸಮಾಜದ ಹಿರಿಯ ನಾಗರಿಕರನ್ನು ಕಾಶಿ, ಗಯಾ, ಪ್ರಯಾಗ ಸೇರಿದಂತೆ ಉತ್ತರ ಭಾರತದ ತೀರ್ಥಕ್ಷೇತ್ರಗಳ ಸಂದರ್ಶನ ಸಂತೋಷ ತಂದಿದೆ ಎಂದಿದ್ದಾರೆ.
ಯಾತ್ರೆಯ ಸಹ ಉಸ್ತುವಾರಿ ರಾಮಚಂದ್ರ ಪಂಡಿತ್ ಮಾತನಾಡಿ ಯಾತ್ರಾರ್ತಿಗಳಲ್ಲಿ ಹೆಚ್ಚಿನವರೆಲ್ಲರೂ ಹಿರಿಯ ನಾಗರಿಕರಾಗಿದ್ದು, ನಿಭಾಯಿಸುವ ಬಗ್ಗೆ ಒಂದು ಸಣ್ಣ ಅಳುಕಿತ್ತು, ಮತ್ತು ಈ ಯೋಜನೆ ಕೈಗೆತ್ತಿಕೊಂಡ ಬಗ್ಗೆ ಸಂತೋಷವೂ ಇತ್ತು, ಈಗ ಯಾತ್ರೆಯನ್ನ ಪೂರೈಸಿದ್ದೇವೆ.


ಈಗ ನಮ್ಮ ಜೊತೆ ಬಂದ ಯಾತ್ರಾರ್ತಿಗಳಿಗೂ ಸಂತೋಷವಾಗಿದೆ, ಸಂಘಟಕರಾದ ನಮಗೂ ಸಂತೋಷವಾಗಿದೆ ಎಂದಿದ್ದಾರೆ
ಒಟ್ಟಾರೆಯಾಗಿ ಯಾತ್ರೆಯು ಸಂಪೂರ್ಣ ಯಶಸ್ವಿಯಾಗಿದ್ದು, ಯಾತ್ರಾರ್ತಿಗಳ ಮನಸ್ಸಿನಲ್ಲಿ ಸಂತೋಷ ಮೂಡಿಸಿದೆ ಎಂದು ಹಲವು ಯಾತ್ರಾರ್ತಿಗಳು ತಮ್ಮ ಮನಸ್ಸಿಗೆಗಳನ್ನ ಹಂಚಿಕೊಂಡಿದ್ದಾರೆ.
ಯಾತ್ರೆಯಲ್ಲಿ ತೂಗು ಸೇತುವೆ ಸರದಾರ ಪದ್ಮಶ್ರೀ ಡಾಕ್ಟರ್ ಗಿರೀಶ್ ಭಾರದ್ವಾಜ್, ಸೇತುವೆ ಸರದಾರ ಕರುಣಾಕರ ಗೋಗಟೆ, ಡಾಕ್ಟರ್ ಗಜಾನನ ಭಟ್, ಪತ್ರಕರ್ತ ಡಾಕ್ಟರ್ ಮಂದಾರ ರಾಜೇಶ್ ಭಟ್, ಸಹಿತ ಒಟ್ಟು ನೂರು ಮಂದಿ ಯಾತ್ರಾರ್ತಿಗಳು ಯಾತ್ರೆ ಕೈಗೊಂಡರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!