ಜನ ಮನದ ನಾಡಿ ಮಿಡಿತ

Advertisement

ಜೈನ ಮುನಿಗಳ ಹತ್ಯೆಗೆ ಸುನಿಲ್ ಕುಮಾರ್ ಖಂಡನೆ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ. ಮುನಿಗಳ ಹತ್ಯೆ ಮನಸ್ಸಿಗೆ ತೀವ್ರ ಅಘಾತ ತಂದಿದೆ. ಮನಸ್ಸನ್ನು ಅತೀವ ಘಾಸಿಗೊಳಿಸಿದೆ ಎಂದು ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಸಾಧು, ಸಂತರು ಶಾಂತಿಪ್ರೀಯರು, ಸಂಸ್ಕಾರ, ಸನಾತನ ಧರ್ಮದ ವಿಚಾರವಾಗಿ ಮಾರ್ಗದರ್ಶನ ನೀಡುವವರು. ಅಹಿಂಸೆ, ಶಾಂತಿ ಬಯಸುವವರು. ಅಂತಹ ಸಾಧು ಸಂತರನ್ನೆ ಈ ರೀತಿ ಹೀನಾಯ ಕೃತ್ಯವೆಸಗಿ ಕೊಲೆ ಮಾಡಿರುವುದನ್ನು ಸಮಾಜ ಒಪ್ಪಲು ಸಾಧ್ಯವೇ ಇಲ್ಲ. ಹತ್ಯೆ ಕುರಿತು ಸೂಕ್ತ ತನಿಖೆ ನಡೆದು ಘೋರ ಕೃತ್ಯವೆಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುನಿಲ್ ಕುಮಾರ್ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ನಾಡಿನ ಸಾಧು ಸಂತರಿಗೆ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!