ಜನ ಮನದ ನಾಡಿ ಮಿಡಿತ

Advertisement

ಜೈನ ಮುನಿಗಳ ಹತ್ಯೆಗೆ ಸುನಿಲ್ ಕುಮಾರ್ ಖಂಡನೆ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ. ಮುನಿಗಳ ಹತ್ಯೆ ಮನಸ್ಸಿಗೆ ತೀವ್ರ ಅಘಾತ ತಂದಿದೆ. ಮನಸ್ಸನ್ನು ಅತೀವ ಘಾಸಿಗೊಳಿಸಿದೆ ಎಂದು ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಸಾಧು, ಸಂತರು ಶಾಂತಿಪ್ರೀಯರು, ಸಂಸ್ಕಾರ, ಸನಾತನ ಧರ್ಮದ ವಿಚಾರವಾಗಿ ಮಾರ್ಗದರ್ಶನ ನೀಡುವವರು. ಅಹಿಂಸೆ, ಶಾಂತಿ ಬಯಸುವವರು. ಅಂತಹ ಸಾಧು ಸಂತರನ್ನೆ ಈ ರೀತಿ ಹೀನಾಯ ಕೃತ್ಯವೆಸಗಿ ಕೊಲೆ ಮಾಡಿರುವುದನ್ನು ಸಮಾಜ ಒಪ್ಪಲು ಸಾಧ್ಯವೇ ಇಲ್ಲ. ಹತ್ಯೆ ಕುರಿತು ಸೂಕ್ತ ತನಿಖೆ ನಡೆದು ಘೋರ ಕೃತ್ಯವೆಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುನಿಲ್ ಕುಮಾರ್ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ನಾಡಿನ ಸಾಧು ಸಂತರಿಗೆ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!