ಜನ ಮನದ ನಾಡಿ ಮಿಡಿತ

Advertisement

ನಿನ್ನೆಯಷ್ಟೇ ಸ್ಥಳಾಂತರಗೊಳಿಸಲಾಗಿದ್ದ ಮನೆಮಂದಿಯ ಮನೆ ಇಂದು ಸಮುದ್ರಪಾಲು!!

ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ನಿನ್ನಯಷ್ಟೇ ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಇಂದು ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ ಇನ್ನೆರಡು ಮನೆಮಂದಿಯನ್ನು ಇಂದು ಸ್ಥಳಾಂತರಿಸಲಾಗಿದೆ.


ಮದನಿ ನಗರದಲ್ಲಿ ಸಂಭವಿಸಿದ ಘೋರ ದುರಂತದ ಹಿನ್ನೆಲೆಯಲ್ಲಿ ಇನ್ನೊಂದು ದುರಂತ ಸಂಭವಿಸದಿರಲಿ ಎಂಬ ಕಾರಣದಿಂದ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಾಡಿ, ತಹಶೀಲ್ದಾರ್ ಪ್ರದೀಪ್ ಕೋರ್ಡೇಕರ್ ಸಹಿತ ಹಲವು ಅಧಿಕಾರಿಗಳು ಜೂ.26 ಕ್ಕೆ ಉಚ್ಚಿಲ ಬಟ್ಟಪ್ಪಾಡಿಗೆ ತೆರಳಿ ಬೀಫಾತುಮ್ಮ ಮನೆಯ ಐದು ಮಂದಿಯನ್ನು ಸ್ಥಳಾಂತರಿಸಿದ್ದರು. ಅವರು ಸಂಬಂಧಿಕರ ಮನೆಗೆ ತೆರಳಿ ಇಂದು ಕೋಟೆಕಾರಿನಲ್ಲಿರುವ ಬಾಡಿಗೆ ಮನೆಗೆ ತೆರಳಿದ್ದಾರೆ. ಈ ಬಾಡಿಗೆ ಮನೆಯ ಮೂರು ತಿಂಗಳ ಬಾಡಿಗೆ ಸರಕಾರ ಭರಿಸಲಿದೆ. ಇಂದು ಬೀಫಾತುಮ್ಮ ಮನೆ ಸಮುದ್ರಪಾಲಾಗುತ್ತಿದ್ದಂತೆ ಅಲಿಮಮ್ಮ ಕುಟುಂಬದ 11 ಮಂದಿ ಹಾಗೂ ಸೌದಾ ಎಂಬವರ ಮನೆಯ 6 ಮಂದಿಯನ್ನು ಅವರ ಸಂಬಂಧಿಕರ ಮನೆಗೆ ಸ್ಥಳಾಂತರಗೊಳಿಸಲಾಗಿದೆ.
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಮುದ್ರತೀರದ ಮನೆಮಂದಿ ಎಚ್ಚರಿಕೆಯಿಂದ ಇರಲು ಉಳ್ಳಾಲ ತಾಲೂಕು ತಹಶೀಲ್ದಾರ್ ಸೂಚಿಸಿದ್ದಾರೆ. ಅಗತ್ಯಬಿದ್ದಲ್ಲಿ ಅಪಾಯದಂಚಿನಲ್ಲಿ ಇರುವ ಇನ್ನಷ್ಟು ಮನೆಮಂದಿಗೆ ಬಾಡಿಗೆ ಮನೆಗಳನ್ನು ಗುರುತಿಸಿ ಮೂರು ತಿಂಗಳುಗಳ ಬಾಡಿಗೆಯನ್ನು ಸರಕಾರ ಭರಿಸಲಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!