ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರ ಪದಗ್ರಹಣ

ಬ್ರಹ್ಮಾವರ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು 27 ರಂದು ಆಶ್ರಯ ಹೋಟೆಲ್ ನಲ್ಲಿ ನಡೆದ ಸರಳ ಸುಂದರ ಸಮಾರಂಭ ನಡೆಯಿತು. ರೋಟರಿ ನಿಯೋಜಿತ ಗವರ್ನರ್ ಕೆ.ಪಾಲಾಕ್ಷ ರವರು ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರು.

ತನ್ನ ತಂದೆಯ ಉದಾತ್ತ ಗುಣಗಳನ್ನು ಮೈಗೂಡಿಸಿಕೊಂಡು, ಸರಳ ಸಜ್ಜನಿಕೆಯೊಂದಿಗೆ,
ಸಮಾಜದ ಹಿರಿಯರನ್ನು ಪೂಜ್ಯ ಭಾವನೆಯಿಂದ ಕಾಣುತ್ತಾ, ತಾನು ಸಂಪಾಧಿಸಿದ ಸಂಪಾದನೆಯಲ್ಲಿ ಒಂದಷ್ಟನ್ನು ಸಮಾಜ ಸೇವೆಗಾಗಿ ವಿನಿಯೋಗಿಸಿ ಸಮಾಜ ಸೇವಕರೆನಿಸಿ ಕೊಂಡಿರುವ, ಪೆಟ್ರೋಲ್ ಪಂಪ್ ಮತ್ತು ಕ್ರಷರ್ ಮಾಲಿಕರೂ ಆಗಿರುವ ಶ್ರೀ ಶ್ರೀಧರ್ ಶೆಟ್ಟಿಯವರು ರೋಟರಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡುತ್ತಾ, ಬ್ರಹ್ಮಾವರ ರೋಟರಿ ಕ್ಲಬ್ ಉತ್ತಮ ಕಾರ್ಯಕ್ರಮಗಳು ಮತ್ತು ಸಮಾಜ ಸೇವೆಯ ಮೂಲಕ ಜನ ಮಾನಸದಲ್ಲಿ ತನ್ನದೇ ಒಂದು ವಿಶೇಷ ಸ್ಥಾನವನ್ನು ಸ್ಥಾಪಿಸುವಲ್ಲಿ ಯಶಸ್ವೀಯಾಗಿದೆ.

ತನ್ನ ಅಧ್ಯಕ್ಷೀಯ ಅವಧಿಯಲ್ಲಿ ರೋಟರಿ ಸಂಸ್ಥೆ ಮಾಡಿಕೊಂಡು ಬಂದಿರುವ ಕಾರ್ಯಕ್ರಮಗಳನ್ನು ಮುಂದುವರಿಸುತ್ತಾ, ಇನ್ನಷ್ಟು ಒಳ್ಳೆಯ ಹೊಸ ಕಾರ್ಯಕ್ರಮಗಳು ಮತ್ತು ಉತ್ತಮ ಕಾರ್ಯದಕ್ಷತೆಯೊಂದಿಗೆ ಕಾರ್ಯ ನಿರ್ವಹಿಸುತ್ತಾ ರೋಟರಿ ಸಂಸ್ಥೆಯ ಕೀರ್ತಿಯನ್ನು ಎತ್ತಿ ಹಿಡಿಯಲು ಪ್ರಯತ್ನಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿ ಪ್ರಜ್ಞಾನ್ .ಪಿ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.ಹರೀಶ್ ಕುಂದರ್ ಇವರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಹಾಗೂ ನೀಲಮ್ಮ ಚಾರಿಟೇಬಲ್ ಟ್ರಸ್ಟ್ ನಿಂದ ಕ್ಲಬ್ ಗೆ ಧನ ಸಹಾಯ ಹಸ್ತಾಂತರಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!