ಜನ ಮನದ ನಾಡಿ ಮಿಡಿತ

Advertisement

ಪೆರ್ಮುದೆಯಲ್ಲಿ ರಿಕ್ಷಾ ಅಪಘಾತ |ಚಾಲಕ ಮೃತ್ಯು

ಕುಂಬಳೆ: ಪೆರ್ಮುದೆಯಲ್ಲಿ ಉಂಟಾದ ಅವಘಡವೊಂದರಲ್ಲಿ ರಿಕ್ಷಾ ಚಾಲಕನೋರ್ವ ದಾರುಣ ಮೃತಪಟ್ಟ ಬಗ್ಗೆ ವರದಿಯಾಗಿದೆ. ಚೇವಾರು ಮಿತ್ತಡ್ಕದ ರಾಮ ಎಂಬವರ ಪುತ್ರ ರಿಕ್ಷಾ ಚಾಲಕನಾದ ಕಿಶೋರ್ (34) ಘಟನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇಲ್ಲಿನ ರಸ್ತೆಯಲ್ಲಿ ಮಲೆನಾಡು ಹೈವೇ ನಿರ್ಮಾಣಕ್ಕಾಗಿ ಇಳಿಸಿದ ಇಂಟರ್‌ಲೋಕ್ ಲೋಡಿಗೆ ರಿಕ್ಷಾ ಬಡಿದು ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ 11 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದ್ದು ಯಾವಗಲೂ ಚೇವಾರು ರಿಕ್ಷಾ ಸ್ಟಾಂಡಿನಲ್ಲಿಟ್ಟು ಬಾಡಿಗೆ ನಡೆಸುತ್ತಿದ್ದ ಕಿಶೋರ್ ಇಂದು ಪೆರ್ಮುದೆಗೆ ಔಷಧಿಗಾಗಿ ತೆರಳಿರುವ ವೇಳೆ ದುರ್ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ. ತಕ್ಷಣ ಇವರನ್ನು ಬಂದ್ಯೋಡಿನ ಖಾಸಗೀ ಆಸ್ಪತ್ರೆಗೆ ಕೊಂಡೊಯ್ದರು ಜೀವ ಉಳಿಸಲಾಗಿಲ್ಲ. ಮೃತರು ಸ್ಥಳಿಯ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದು ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ರಾಮ- ಕಮಲ ದಂಪತಿಗಳ ಪುತ್ರನಾದ ಕಿಶೋರ್ ಸಹೋದರ ಪ್ರಶಾಂತ್, ಪತ್ನಿ ಪವಿತ್ರ ಮಕ್ಕಳಾದ ಜಿಷ್ಣು , ಆದೀಶ್ ಎಂಬಿವರನ್ನಗಲಿದ್ದಾರೆ. ಎಲ್ಲರ ಪ್ರೀತಿ ಪಾತ್ರರಾಗಿದ್ದ ಕಿಶೋರ್ ಅವರ ಅಗಲುವಿಕೆ ನಾಡಿನಲ್ಲಿ ಶೋಕ ಅವರಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!