ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿಯ ಶ್ರೀ ನಾರಾಯಣ ಗುರು ಶಾಲೆ ವಿದ್ಯಾರ್ಥಿ ಸಂಸತ್‌ ಉದ್ಘಾಟನೆ


,ಮೂಲ್ಕಿ:ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ,ಸಮರ್ಪಣಾ ಮನೋಭಾವ ಹಾಗೂ ಕಠಿಣ ನಿರ್ಧಾರವಿದ್ದಾಗ ಮಾತ್ರ ಯಶಸ್ಸು ಸಾಧ್ಯ, ನಮ್ಮಲ್ಲಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡಾಗ ಯಶಸ್ಸು ತನ್ನಿಂದ ತಾನೇ ನಮ್ಮದಾಗುತ್ತದೆಯೆಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣ ಹೇಳಿದರು.

ಮೂಲ್ಕಿಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಲೀಲಾವತಿ ಜಯ ಸುವರ್ಣ ತೆರೆದ ಸಭಾಂಗಣದಲ್ಲಿ ಜರಗಿದ ಶಾಲೆಯ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ ವಹಿಸಿದ್ದು ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿತಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯ .ಶಾಲಾ ಹಂತದಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.ಕಾಲೇಜು ವಿದ್ಯಾರ್ಥಿ ನಾಯಕ ರಿಯಾನ್ ಪ್ರಣಿತ್ , ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಕಾರ್ತಿಕ್‌ ಜೊತೆ ಕಾಲೇಜು ಸಂಸತ್ತಿನ ಇತರ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದರು. ಸಂಸ್ಥೆಯ ಕಾರ್ಯದರ್ಶಿ ಬಾಲಚಂದ್ರ ಸನಿಲ್ ಆಡಳಿತ ಮಂಡಳಿಯ ಸದಸ್ಯರಾದ ಯೋಗೀಶ್ ಕೋಟ್ಯಾನ್ ,ಹೇಮರಾಜ್ ಕೆ, ಸಂಸ್ಥೆಯ ಆಡಳಿತಾಧಿಕಾರಿ ಮಂಜುಳಾ, ಪ್ರಾಂಶುಪಾಲರಾದ ಯತೀಶ್ ಅಮೀನ್ ಉಪಸ್ಥಿತರಿದ್ದರು.ಕಾರ್ಯದರ್ಶಿ ಬಾಲಚಂದ್ರ ಸನಿಲ್‌ ಸ್ವಾಗತಿಸಿದರು, ಪ್ರಾಂಶುಪಾಲ ಯತೀಶ್‌ ಅಮೀನ್ ವಂದಿಸಿದರು.ಉಪನ್ಯಾಸಕಿಯರಾದ ವನಜ ವಾಸು ಹಾಗೂ ಶ್ವೇತ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!