
ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ನೀರುಪಾಲಾದ ಘಟನೆ ನಡೆದಿದೆ. ಸುರತ್ಕಲ್ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ಗಾಳ ಹಾಕಿ ಮೀನು ಹಿಡಿಯಲು ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಬಂದಿದ್ದಾರೆ. ಮೀನು ಹಿಡಿಯುತ್ತಿರುವ ವೇಳೆ ಮೈಕಲ್ ಎಂಬವರು ಆಯ ತಪ್ಪಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ರು.

ಭಾರೀ ಮಳೆಯಿಂದ ನದಿ ಉಕ್ಕಿ ಹರಿಯುತಿದ್ದು, ದೋಣಿಯ ಮೂಲಕ ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ಇದೀಗ ಬಂಟ್ವಾಳ ಅಗ್ನಿಶಾಮಕ ದಳದವರು ತೀವ್ರ ಹುಡುಕಾಟ ನಡೆಸಿದ ಬಳಿಕ ಮೃತದೇಹ ಪತ್ತೆಯಾಗಿದೆ.



